Advertisement

Parashurama Theme Park ಹಗರಣಗಳ ತನಿಖೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

10:53 PM Jan 17, 2024 | Team Udayavani |

ಕುಂದಾಪುರ: ಕಾರ್ಕಳದ ಪರಶುರಾಮ ಥೀಮ್‌ ಪಾರ್ಕ್‌ ಹಗರಣದ ತನಿಖೆ ನಡೆಯಲಿದೆ. ಪ್ರವಾಸೋದ್ಯಮ ಸಚಿವ ಎಚ್‌.ಕೆ. ಪಾಟೀಲ್‌ ಅವರಿಗೆ ಈ ಬಗ್ಗೆ ಮನವಿ ನೀಡಲಾಗಿದ್ದು ಸಮಿತಿ ರಚಿಸಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿನ ಕ್ರಮಕೈಗೊಳ್ಳಲು ವಿನಂತಿಸಲಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ.

Advertisement

ಪತ್ರಕರ್ತರೊಂದಿಗೆ ಅವರು ಮಾತನಾಡಿ, ಥೀಂ ಪಾರ್ಕ್‌ ಹಗರಣ ತನಿಖೆ ನಡೆಯಲಿದೆ ಎಂದು ಸ್ವತಃ ಮುಖ್ಯಮಂತ್ರಿಗಳೇ ಹೇಳಿದ್ದಾರೆ, ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಹಗರಣ ಕೂಡ ತನಿಖೆಯಾಗಲಿದೆ ಎಂದ ಅವರು ಗಂಗೊಳ್ಳಿ ಮೀನುಗಾರಿಕಾ ಬೋಟ್‌ಗಳ ದುರಂತಕ್ಕೆ ಸರಕಾರದ ಹಂತದಲ್ಲಿ ಪರಿಹಾರ ನೀಡುವ ಪ್ರಕ್ರಿಯೆ ಚಾಲನೆಯಲ್ಲಿದೆ ಎಂದರು.

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಾದ ಹರಿಪ್ರಸಾದ್‌ ಶೆಟ್ಟಿ, ಗುಡಿಬೆಟ್ಟು ಪ್ರದೀಪ್‌ ಶೆಟ್ಟಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next