Advertisement

ಸಿಎಂ ಪಟ್ಟಕ್ಕೆ ಬಂಡವಾಳ ಹೂಡಿಕೆ: ಎಂ.ಪಿ.ರೇಣುಕಾಚಾರ್ಯ

06:49 AM May 16, 2019 | Team Udayavani |

ಹುಬ್ಬಳ್ಳಿ: ಮುಖ್ಯಮಂತ್ರಿಯಾಗಲು ಡಿ.ಕೆ.ಶಿವಕುಮಾರ ಹಾಗೂ ಎಂ.ಬಿ.ಪಾಟೀಲ ಹಾವು-ಮುಂಗುಸಿಯಂತೆ ಕಚ್ಚಾಡುತ್ತಿದ್ದು, ಸಿಎಂ ಹುದ್ದೆಗಾಗಿ ಕುಂದಗೋಳ ಹಾಗೂ ಚಿಂಚೋಳಿಯಲ್ಲಿ ಬಂಡವಾಳ ಹೂಡಿಕೆ ಮಾಡುತ್ತಿದ್ದಾರೆ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಆರೋಪಿಸಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಡಿಕೆಶಿಯವರು ಕುಂದಗೋಳದಲ್ಲಿ 50 ಕೋಟಿ ರೂ.ಬಂಡವಾಳ ಹೂಡಿಕೆ ಮಾಡಿದ್ದರೆ, ಎಂ.ಬಿ.ಪಾಟೀಲ ಅವರು ಚಿಂಚೋಳಿಯಲ್ಲಿ ಹಣ ಹಂಚುತ್ತಿದ್ದಾರೆ. ಕುಂದಗೋಳದ ಒಂದೊಂದು ಜಿಪಂಗೆ ಒಬ್ಬೊಬ್ಬ ಸಚಿವರನ್ನು ಉಸ್ತುವಾರಿ ಮಾಡಿದ್ದಾರೆ.

ಮಂತ್ರಿ ಸ್ಥಾನ ಉಳಿಯಬೇಕಾದರೆ ಖರ್ಚು ಮಾಡಿ ಎಂದು ಸಚಿವರಿಗೆ ಡಿಕೆಶಿ ಸೂಚಿಸಿದ್ದಾರೆ. ಏನಾದರೂ ಮಾಡಿ ಮುಖ್ಯಮಂತ್ರಿ ಆಗಬೇಕೆಂದು ಅವರು ಜಿದ್ದಿಗೆ ಬಿದ್ದಿದ್ದಾರೆ. ಕಾಂಗ್ರೆಸ್‌-ಜೆಡಿಎಸ್‌ ಕಾರ್ಯಕರ್ತರು ಈಗ ಪರಸ್ಪರ ಬೈದಾಡಿಕೊಳ್ಳುತ್ತಿದ್ದು, ಮೇ 23ರ ಫಲಿತಾಂಶದ ನಂತರ ಬಡಿಗೆ ಹಿಡಿದುಕೊಂಡು ಬಡಿದಾಡಿಕೊಳ್ಳಲಿದ್ದಾರೆ ಎಂದು ಟೀಕಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next