Advertisement

ಅಲ್ಪಸಂಖ್ಯಾತರ ಸಮಾವೇಶಕ್ಕೆ ಫಾರೂಕ್‌ ಅಬ್ದುಲ್ಲಾಗೆ ಆಹ್ವಾನ

07:15 AM Dec 08, 2017 | Team Udayavani |

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಪಕ್ಷ ಸಂಘಟನೆ ಹಿನ್ನೆಲೆಯಲ್ಲಿ ತುಮಕೂರಿನಲ್ಲಿ ಡಿ.10ರಂದು ಜೆಡಿಎಸ್‌ ಹಮ್ಮಿಕೊಂಡಿರುವ ಅಲ್ಪಸಂಖ್ಯಾತರ ಸಮಾವೇಶಕ್ಕೆ ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್‌ ಅಬ್ದುಲ್ಲಾ ಅವರಿಗೆ ಆಹ್ವಾನ ನೀಡಲಾಗಿದೆ.

Advertisement

ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡರ ಆಹ್ವಾನದ ಮೇರೆಗೆ ಫಾರೂಕ್‌ ಅಬ್ದುಲ್ಲಾ ತುಮಕೂರಿನ
ಅಲ್ಪಸಂಖ್ಯಾತರ ಸಮಾವೇಶದಲ್ಲಿ ಭಾಗಿಯಾಗಲು ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಫಾರೂಕ್‌ ಅಬ್ದುಲ್ಲಾ ಅವರು ಡಿ.9ರಂದೇ ಬೆಂಗಳೂರಿಗೆ ಆಗಮಿಸಲಿದ್ದು, ಡಿ.10ರಂದು ತುಮಕೂರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಅವರ ಜತೆಗೆ ಜೆಡಿಎಸ್‌ ಮಹಾ ಪ್ರಧಾನ ಕಾರ್ಯದರ್ಶಿ ಡ್ಯಾನಿಶ್‌ ಅಲಿ ಸಹ ಆಗಮಿಸಲಿದ್ದಾರೆ. ಈ ಮಧ್ಯೆ, ಅದೇ ದಿನ ಕಾಂಗ್ರೆಸ್‌ ವತಿಯಿಂದ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌ ಸ್ವಕ್ಷೇತ್ರ ಕೊರಟಗೆರೆಯಲ್ಲಿ ಟಿಪ್ಪು ಜಯಂತಿ ಆಯೋಜಿಸಲಾಗಿದೆ. ಆ ಕಾರ್ಯಕ್ರಮಕ್ಕೆ ಮಾಜಿ ಸಚಿವ ಜಮೀರ್‌ ಅಹಮದ್‌ ಅವರಿಗೆ ಆಹ್ವಾನ ನೀಡಲಾಗಿದೆ. ಜೆಡಿಎಸ್‌ನ ಅಲ್ಪಸಂಖ್ಯಾತರ ಸಮಾವೇಶಕ್ಕೆ ಟಾಂಗ್‌ ನೀಡುವ ಸಲುವಾಗಿಯೇ ಅದೇ ದಿನ ಕಾಂಗ್ರೆಸ್‌ನಿಂದ ಟಿಪ್ಪು ಜಯಂತಿ ಆಯೋಜಿಸಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
 

Advertisement

Udayavani is now on Telegram. Click here to join our channel and stay updated with the latest news.

Next