Advertisement

ಸಾಂಸ್ಕೃತಿಕ ಉತ್ಸವಕ್ಕೆ ಪ್ರಧಾನಿಗೆ ಆಹ್ವಾನ

11:27 AM Aug 04, 2018 | |

ಹುಬ್ಬಳ್ಳಿ: ವಿಜಯಪುರದಲ್ಲಿ ಡಿ.31ರಂದು ನಡೆಯಲಿರುವ ಭಾರತೀಯ ವಿಕಾಸ ಸಂಗಮದ ಭಾರತೀಯ ಸಾಂಸ್ಕೃತಿಕ ಉತ್ಸವ-5 ಕಾರ್ಯಕ್ರಮಕ್ಕೆ ಆಗಮಿಸುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಉತ್ಸವದ ಸಂಘಟನಾ ಸಮಿತಿ ಆಹ್ವಾನ ನೀಡಿದೆ. 

Advertisement

ನವದೆಹಲಿಯಲ್ಲಿ ಸಂಸದರಾದ ಸುರೇಶ ಅಂಗಡಿ, ಭಗವಂತ ಖೂಬಾ, ರಾಜ್ಯಸಭಾ ಮಾಜಿ ಸದಸ್ಯ ಬಸವರಾಜ ಪಾಟೀಲ ಸೇಡಂ, ಶಾಸಕ ಬಸನಗೌಡ ಪಾಟೀಲ ಯತ್ನಾಳ, ವಿಕಾಸ ಸಂಗಮದ ರಾಜ್ಯ ಸಂಚಾಲಕ ಚಂದ್ರಶೇಖರ ಢವಳಗಿ ಅವರನ್ನೊಳಗೊಂಡ ನಿಯೋಗ ಮೋದಿಯವರನ್ನು ಭೇಟಿ ಮಾಡಿ ಸಮಾರಂಭಕ್ಕೆ ಆಗಮಿಸುವಂತೆ ಆಹ್ವಾನ ನೀಡಿತು.

ಡಿ.31ರಂದು ನಡೆಯುವ ಸಮಾರೋಪ ಸಮಾರಂಭಕ್ಕೆ ಆಗಮಿಸುವಂತೆ ಪ್ರಧಾನಿಗೆ ಮನವಿ ಮಾಡಲಾಗಿದ್ದು, ಇದಕ್ಕೆ ಮೋದಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಅದೇ ರೀತಿ, ಸಮಾರಂಭದ ಉದ್ಘಾಟನೆಗೆ ಆಗಮಿಸುವಂತೆ ರಾಷ್ಟ್ರಪತಿ ರಾಮನಾಥ ಕೋವಿಂದ ಅವರಿಗೂ ಆಹ್ವಾನ ನೀಡಲಾಗಿದೆ  ಎಂದು ಚಂದ್ರಶೇಖರ ಢವಳಗಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next