Advertisement

ದಾವಣಗೆರೆಯಿಂದ ಸ್ಪರ್ಧಿಸಲು ರಾಹುಲ್‌ ಗಾಂಧಿಗೆ ಆಹ್ವಾನ

12:23 AM Mar 17, 2019 | |

ದಾವಣಗೆರೆ: ನಡು ಕರ್ನಾಟಕದ ಕೇಂದ್ರ ಬಿಂದು ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಅಖೀಲ ಭಾರತ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ಗಾಂಧಿ ಅವರಿಗೆ ಜಾತ್ಯತೀತ ಜನತಾದಳದ ರಾಜ್ಯ ವಕ್ತಾರ ಜಸ್ಟಿನ್‌ ಜಯಕುಮಾರ್‌ ಆಹ್ವಾನ ನೀಡಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಾವಣಗೆರೆ ಲೋಕಸಭಾ ಕ್ಷೇತ್ರ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೈತ್ರಿಧರ್ಮದ ಭಾಗವಾಗಿ ಕಾಂಗ್ರೆಸ್‌ ಪಾಲಾಗಿದೆ. ದಕ್ಷಿಣ ಭಾರತದಿಂದ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂ ಧಿ ಬಳ್ಳಾರಿ, ಮೈಸೂರು, ದಾವಣಗೆರೆ ಯಾವುದಾದರೂ ಒಂದು ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವಂತೆ ಕಾಂಗ್ರೆಸ್‌ ಮುಖಂಡರು ಒತ್ತಾಯಿಸುತ್ತಿದ್ದಾರೆ ಎಂದರು.

ಈ ಕ್ಷೇತ್ರದಲ್ಲಿ ನಿರಾಯಾಸವಾಗಿ ಗೆಲ್ಲಬಹುದು. ದಾವಣಗೆರೆ, ಮಧ್ಯ ಕರ್ನಾಟಕ ಆಗಿರುವುದರಿಂದ ಸುತ್ತಮುತ್ತಲ ಜಿಲ್ಲೆಯ ಲೋಕಸಭಾ ಸ್ಥಾನದ ಅಭ್ಯರ್ಥಿಗಳ ಗೆಲುವಿಗೂ ಇದು ಸಹಕಾರಿಯಾಗಲಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next