Advertisement

ಅಂತರ್‌ಗದ್ದೆ: 2.90 ಕೋಟಿ ರೂ. ಅನುದಾನದಲ್ಲಿ ಕಿಂಡಿ ಅಣೆಕಟ್ಟು ಮಂಜೂರು

12:15 AM Jun 09, 2019 | Team Udayavani |

ಬೈಂದೂರು: ಯಡ್ತರೆ ಗ್ರಾಮದ ಕೊಸಳ್ಳಿ ಜಲಪಾತದಿಂದ ಹರಿಯುವ ತೂದಳ್ಳಿ ನದಿಗೆ ಅಂತರ್‌ಗದ್ದೆ ಎಂಬಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ 2.90 ಕೋಟಿ ರೂ. ಅನುದಾನದಲ್ಲಿ ಕಿಂಡಿ ಅಣೆಕಟ್ಟು ಮಂಜೂರಾಗಿದೆ. ಈ ಪ್ರದೇಶಕ್ಕೆ ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಭೇಟಿ ನೀಡಿ ವೀಕ್ಷಣೆ ನಡೆಸಿದರು.

Advertisement

ಈ ಸಂದರ್ಭ ಮಾತನಾಡಿದ ಅವರು, ಕೃಷಿಕರು ಅತ್ಯಧಿಕ ಸಂಖ್ಯೆಯಲ್ಲಿ ಇರುವ ಈ ಭಾಗದಲ್ಲಿ ಕಿಂಡಿ ಅಣೆಕಟ್ಟು ನಿರ್ಮಿಸಲಾಗುವುದರಿಂದ ರೈತರಿಗೆ ಸಾಕಷ್ಟು ಅನುಕೂಲವಾಗಲಿದೆ. ಶೀಘ್ರ ಟೆಂಡರ್‌ ಪ್ರಕ್ರಿಯೆ ಮುಗಿಸಿ ಕಾಮಗಾರಿ ನಡೆಸಲು ಅಧಿಕಾರಿಗಳಿಗೆ ತಿಳಿಸಿದ್ದೇನೆ. ಕುಡಿಯುವ ನೀರು ಹಾಗೂ ನೀರಾವರಿ ಯೋಜನೆಗಳ ಅನುಷ್ಠಾನಗಳ ಬಗ್ಗೆ ವಿಶೇಷ ಒತ್ತು ನೀಡುತ್ತೇವೆ ಎಂದರು.

ಈ ಸಂದರ್ಭ ಜಿ.ಪಂ. ಸದಸ್ಯರಾದ ಶಂಕರ ಪೂಜಾರಿ, ಸುರೇಶ್‌ ಬಟ್ವಾಡಿ, ರೈತ ಸಂಘದ ಅಧ್ಯಕ್ಷ ದೀಪಕ್‌ ಕುಮಾರ್‌ ಶೆಟ್ಟಿ, ಗ್ರಾ.ಪಂ. ಸದಸ್ಯ ಜೈಸನ್‌ ಎಂ.ಡಿ., ಕೇಶವ್‌ ಅಂತರ್‌ಗದ್ದೆ ಉಪಸ್ಥಿತರಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next