Advertisement

ಐಎನ್‌ಎಕ್ಸ್‌ ಕೇಸ್‌: ಇಂದ್ರಾಣಿ ಮಾಫಿ ಸಾಕ್ಷಿ

12:17 PM Jul 06, 2019 | Team Udayavani |

ಹೊಸದಿಲ್ಲಿ: ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಹಾಗೂ ಅವರ ಪುತ್ರ ಕಾರ್ತಿ ಆರೋಪಿಗಳಾಗಿರುವ ಐಎನ್‌ಎಕ್ಸ್‌ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಇಂದ್ರಾಣಿ ಮುಖರ್ಜಿ ಮಾಫಿ ಸಾಕ್ಷಿಯಾಗಲು ಒಪ್ಪಿದ್ದಾರೆ. ಪುತ್ರಿ ಶೀನಾ ಬೋರಾ ಕೊಲೆ ಪ್ರಕರಣದಲ್ಲಿ ಜೈಲಲ್ಲಿರುವ ಇಂದ್ರಾಣಿಗೆ ಐಎನ್‌ಎಕ್ಸ್‌ ಪ್ರಕರಣದಲ್ಲಿ ದಿಲ್ಲಿ ನ್ಯಾಯಾಲಯ ಕ್ಷಮಾಪಣೆ ನೀಡಿದೆ. ಕೇಸ್‌ನಲ್ಲಿ ಇಂದ್ರಾಣಿ ಪ್ರಮುಖ ಸಾಕ್ಷಿಯಾಗಿದ್ದಾರೆ. 305 ಕೋಟಿ ರೂ. ವಿದೇಶದ ಹಣವನ್ನು ಸ್ವೀಕರಿಸಲು ಐಎನ್‌ಎಕ್ಸ್‌ ಮೀಡಿಯಾ ಎಫ್ಐಪಿಬಿ ಅನುಮತಿ ಪಡೆಯುವಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next