Advertisement

ಐಪಿಎಲ್ ಬೆಟ್ಟಿಂಗ್‌ಗೆ ಸಾಲ : ಹಣ್ಣಿನ ವ್ಯಾಪಾರಿ ಆತ್ಮಹತ್ಯೆ

01:41 PM Oct 14, 2021 | Team Udayavani |

ಬಾಗಲಕೋಟೆ : ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್‌ಗಾಗಿ ಸಾಲ ಮಾಡಿದ್ದ ಹಣ್ಣಿನ ವ್ಯಾಪಾರಿಯೋರ್ವ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀಳಗಿ ತಾಲೂಕಿನ ಕಾತರಕಿ ಸೇತುವೆ ಬಳಿಯ ಘಟಪ್ರಭಾ ನದಿಯಲ್ಲಿ ಗುರುವಾರ ಸಂಭವಿಸಿದೆ.

Advertisement

ಆತ್ಮಹತ್ಯೆ ಮಾಡಿಕೊಂಡ ಹಣ್ಣಿನ ವ್ಯಾಪಾರಿ ಬೀಳಗಿ ತಾಲೂಕಿನ ಕಾತರಕಿಯ ಸೈಯದ ವಾಳದ (38) ಎಂದು ಗುರುತಿಸಲಾಗಿದೆ. ಈತ ಐಪಿಎಲ್ ಬೆಟ್ಟಿಂಗ್ ಆಡಲು ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದ. ಸಾಲ ತೀರಿಸಲಾಗಿದೆ ಘಟಪ್ರಭಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಅಗ್ನಿ ಶಾಮಕ ದಳ ಹಾಗೂ ಪೊಲೀಸರು ಶವ ಹುಡಕಾಟ ನಡೆಸಿದ್ದು, ಮಧ್ಯಾಹ್ನದವರೆಗೂ ಶವ ಪತ್ತೆಯಾಗಿರಲಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next