Advertisement

Ramanagar; ಕುಮಾರಸ್ವಾಮಿಯನ್ನು ಒಮ್ಮೆ ಗವರ್ನರ್ ಮಾಡಿಬಿಡಲಿ: ಇಕ್ಬಾಲ್ ಹುಸೇನ್

04:21 PM Jan 12, 2024 | Team Udayavani |

ರಾಮನಗರ: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕುಮಾರಸ್ವಾಮಿ ಸ್ಪರ್ಧೆ ಮಾಡಿದರೆ ತುಂಬು ಹೃದಯದ ಸ್ವಾಗತ. ಅವರು ಎಲ್ಲಾ ಚುನಾವಣೆಗಳಲ್ಲಿ ಸ್ಪರ್ಧಿಸಿದ್ದಾರೆ. ಎಂಎಲ್ಎ, ಎಂಪಿ ಎಲೆಕ್ಷನ್ ಮಾಡಿ ಎರಡು ಬಾರಿ ಸಿಎಂ ಆಗಿದ್ದಾರೆ. ಅವರು ಗವರ್ನರ್ ಒಮ್ಮೆಯೂ ಆಗಿಲ್ಲ, ಅದನ್ನೂ ಮಾಡಿ ಬಿಡಬೇಕು. ಗವರ್ನರ್ ಮಾಡಿದರೆ ಅಲ್ಲಾದರೂ ಅಚ್ಚುಕಟ್ಟಾಗಿ ಇರುತ್ತಾರೆ ಎಂದು ಶಾಸಕ ಇಕ್ಬಾಲ್ ಹುಸೇನ್ ವ್ಯಂಗ್ಯವಾಡಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿ ಮೂವರು ಡಿಸಿಎಂ ಬಗ್ಗೆ ಚರ್ಚೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ಮಲ್ಲಿಕಾರ್ಜುನ್ ಖರ್ಗೆ ಅವರು ಈ ಬಗ್ಗೆ ಈಗಾಗಲೇ ಚರ್ಚೆ ಮಾಡಿದ್ದಾರೆ. ನಮ್ಮ ಹೈಕಮಾಂಡ್ ಬಲಿಷ್ಠವಾಗಿದೆ. ಈ ಬಗ್ಗೆ ಅವರೇ ತೀರ್ಮಾನ ಮಾಡುತ್ತಾರೆ. ಈ ಕುರಿತು ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next