Advertisement

ಮಿತಿಮೀರಿದ ನಿರುದ್ಯೋಗ; ಇರಾಕ್ ನಲ್ಲಿ ಭುಗಿಲೆದ್ದ ಪ್ರತಿಭಟನೆ; ಸೇನಾ ದಾಳಿಗೆ ಐವರು ಬಲಿ

10:09 AM Nov 07, 2019 | Nagendra Trasi |

ಬಾಗ್ದಾದ್: ಇರಾಕ್ ರಾಜಧಾನಿಯಲ್ಲಿ ಸರ್ಕಾರದ ವಿರೋಧಿ ಧೋರಣೆ ಖಂಡಿಸಿ ಸಾವಿರಾರು ಮಂದಿ ಪ್ರತಿಭಟನೆ ನಡೆಸುತ್ತಿದ್ದು, ಇರಾಕ್ ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಗೆ ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ.

Advertisement

ಪ್ರಧಾನಿ ಕಚೇರಿ ಸಮೀಪದಿಂದ 500 ಮೀಟರ್ ದೂರದಲ್ಲಿದ್ದ ಪ್ರತಿಭಟನಾಕಾರರ ಮೇಲೆ ಗುಂಡಿನ ಸುರಿಮಳೆಗೆರೆದ ಪರಿಣಾಮ ಐವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಹಲವಾರು ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ.

ಇರಾಕ್ ಸೇನಾಪಡೆ ಉಮ್ಮ ಖ್ವಾಸ್ರ ಬಂದರು ಪ್ರದೇಶದ ದ್ವಾರದಲ್ಲಿ ಬಿಗಿ ಕಾವಲು ಕಾಯುತ್ತಿದ್ದು, ಪ್ರತಿಭಟನಾಕಾರರು ರಸ್ತೆ ಬಂದ್ ಮಾಡಿದ್ದು, ಸೆಂಟ್ರಲ್ ಬಾಗ್ದಾದ್ ನಲ್ಲಿ ಸಾವಿರಾರು ಜನರು ಪ್ರತಿಭಟನೆ, ಹಿಂಸಾಚಾರದಲ್ಲಿ ತೊಡಗಿದ್ದಾರೆ.

ಇರಾಕ್ ನಲ್ಲಿ ಮಿತಿ ಮೀರಿರುವ ಭ್ರಷ್ಟಾಚಾರ, ನಿರುದ್ಯೋಗ ಸಮಸ್ಯೆ ಹಾಗೂ ಕಳಪೆ ಸಾರ್ವಜನಿಕ ಸೇವೆಯಿಂದ ಜನರು ಸರ್ಕಾರದ ವಿರುದ್ಧ ರೊಚ್ಚಿಗೆದ್ದಿರುವುದಾಗಿ ವರದಿ ವಿವರಿಸಿದೆ. ಪ್ರತಿಭಟನಾಕಾರರ ಪರವಾಗಿ ರಾಜಕೀಯ ಮುಖಂಡರು ಅನುಕಂಪ ವ್ಯಕ್ತಪಡಿಸಿದ್ದು, ಸರ್ಕಾರ ಹಾಗೂ ಪ್ರತಿಭಟನಾಕಾರರ ಹಿಂಸಾಚಾರವನ್ನು ಖಂಡಿಸಿದ್ದು, ಕೂಡಲೇ ಪ್ರತಿಭಟನೆಯನ್ನು ನಿಲ್ಲಿಸುವಂತೆ ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next