Advertisement

Bengal; ಕಬ್ಬಿಣದ ಹಿಡಿತ ಸಂಪೂರ್ಣವಾಗಿ ತುಕ್ಕು ಹಿಡಿದಿದೆ: ನಡ್ಡಾ ಆಕ್ರೋಶ

08:25 PM Aug 18, 2024 | Team Udayavani |

ಹೊಸದಿಲ್ಲಿ: ಕೋಲ್ಕತಾದಲ್ಲಿ ಟ್ರೇನಿ ವೈದ್ಯೆಯ ಮೇಲೆ ಅ*ತ್ಯಾಚಾರ ಎಸಗಿ ಹ*ತ್ಯೆ ಮಾಡಿದ ಪ್ರಕರಣ ವಿರೋಧಿಸಿ ಪ್ರತಿಭಟನೆಗಳು ಮುಂದುವರೆದಿದ್ದು, ‘ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಸರಕಾರವು ಮಹಿಳಾ ವಿರೋಧಿ, ಯುವ ವಿರೋಧಿ ಮತ್ತು ಪ್ರಜಾಪ್ರಭುತ್ವ ವಿರೋಧಿ’ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭಾನುವಾರ (ಆ18) ಆಕ್ರೋಶ ಹೊರ ಹಾಕಿದ್ದಾರೆ.

Advertisement

ಎಕ್ಸ್‌ ಪೋಸ್ಟ್‌ನಲ್ಲಿ, “ಮುಖ್ಯಮಂತ್ರಿ ರಾಜ್ಯದ ಜನರನ್ನು ವಿಫಲಗೊಳಿಸಿದ್ದಾರೆ, ನಿರ್ಭಯದಿಂದ ಲೂಟಿ ಮಾಡಿದ ಆಡಳಿತದ ಅಧ್ಯಕ್ಷತೆ ವಹಿಸಿದ್ದಾರೆ. ಕಬ್ಬಿಣದ ಹಿಡಿತವು ಸ್ಪಷ್ಟವಾಗಿ ಭಯಾನಕವಾಗಿ ತುಕ್ಕು ಹಿಡಿದಿದೆ” ಎಂದು ಬರೆದಿದ್ದಾರೆ.

ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಅ*ತ್ಯಾಚಾರ ಮತ್ತು ಹ*ತ್ಯೆಗೀಡಾದ ಟ್ರೈನಿ ವೈದ್ಯೆಗೆ ನ್ಯಾಯಕ್ಕಾಗಿ ಒತ್ತಾಯಿಸಿ ವಿವಿಧ ವೈದ್ಯಕೀಯ ಕಾಲೇಜುಗಳ ವಿದ್ಯಾರ್ಥಿಗಳು ಭಾನುವಾರ ಕೋಲ್ಕತಾದಲ್ಲಿ ಬೃಹತ್ ಮೆರವಣಿಗೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next