Advertisement
ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಸುನೀಲ ಮದ್ದಿನ ಅವರಿಗೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರು, ಬೇಕಿನಾಳ ಗ್ರಾಮ ಪಂಚಾಯತಿ ಅಧ್ಯಕ್ಷ, ಪಿಡಿಒ ಮತ್ತು ಕಂಪ್ಯೂಟರ್ ಆಪರೇಟರ್ ಸೇರಿದಂತೆ ಸಾಕಷ್ಟು ಹಗರಣ ಮಾಡಿದ್ದಾರೆ. 14ನೇ ಹಣಕಾಸಿನ ಯೋಜನೆಯಲ್ಲಿ 30-35 ಲಕ್ಷ ರೂ., 192 ಸೌಚಾಲಯದ ಅನುದಾನ ದುರ್ಬಳಕೆ, 80 ಲಕ್ಷ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಅವ್ಯವಹಾರ ಹೀಗೆ ಗ್ರಾಮಪಂಚಾಯತಿಗೆ ಬಿಡುಗಡೆಯಾದ ಅನುದಾನ ದುರ್ಬಳಕೆ ಮಾಡಿದ್ದಾರೆ. ಈ ಕುರಿತು ಮೇಲಾಧಿಕಾರಿಗಳಿಗೆ ಸಾಕಷ್ಟು ಸಲ ಮೌಖೀಕವಾಗಿಹಾಗೂ ಲಿಖೀತವಾಗಿ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಬೇಕಿನಾಳ ಗ್ರಾಪಂ ಹಗರಣವನ್ನು ತನಿಖೆ ಮಾಡಿ ತಪ್ಪಿತಸ್ತರಿಗೆ ಶಿಕ್ಷೆ ನೀಡಬೇಕು. ತನಿಖೆ ಕೈಕೊಳ್ಳದಿದ್ದರೇ ಉಗ್ರ ಹೋರಾಟ ಕೈಕೊಳ್ಳಬೇಕಾಗುತ್ತದೆ. ಜಿಪಂ ಸಿಇಒ ಬಂದು ಮನವಿ ಸ್ವೀಕರಿಸುವವರೆಗೂ ಧರಣಿ ಮುಂದುವರೆಸುತ್ತೇವೆ ಎಂದು ಅ ಧಿಕಾರಿಗೆಳಿಗೆ ಎಚ್ಚರಿಕೆ ನೀಡಿದರು.
Advertisement
ಬೇಕಿನಾಳ ಗ್ರಾಪಂನಲ್ಲಿ ಅವ್ಯವಹಾರ
02:37 PM Jan 03, 2020 | Suhan S |
Advertisement
Udayavani is now on Telegram. Click here to join our channel and stay updated with the latest news.