Advertisement

ನೀರಾವರಿ ಯೋಜನೆ ಪೂರ್ಣಗೊಳಿಸಲು ಮನವಿ

08:41 AM Jul 05, 2020 | Suhan S |

ಅಫಜಲಪುರ: ಜಿಲ್ಲೆಯ ಜನರ ಜೀವನಾಡಿಯಾಗಿರುವ ನೀರಾವರಿ ಯೋಜನೆಗಳಿಗೆ ಗರ ಬಡಿದಿವೆ. ಹೀಗಾಗಿ ಜಿಲ್ಲೆಯಲ್ಲಿರುವ ಬೆಣ್ಣೆತೋರಾ, ಗಂಡೋರಿ ನಾಲಾ, ಅಮರ್ಜಾ ಡ್ಯಾಂ ನೀರಾವರಿ ಯೋಜನೆಗಳನ್ನು ಶೀಘ್ರವೇ ಪೂರ್ಣಗೊಳಿಸುವಂತೆ ನವ ಕರ್ನಾಟಕ ರೈತ ಸಂಘದ ರಾಜ್ಯಾಧ್ಯಕ್ಷ ದಯಾನಂದ ಸಿ. ಪಾಟೀಲ ಸಚಿವ ರಮೇಶ ಜಾರಕಿಹೊಳಿಗೆ ಮನವಿ ಸಲ್ಲಿಸಿದರು.

Advertisement

ತಾಲೂಕಿನ ಸೊನ್ನ ಗ್ರಾಮದ ಭೀಮಾ ಬ್ಯಾರೇಜ್‌ಗೆ ಸಚಿವ ರಮೇಶ ಜಾರಕಿಹೊಳಿ ಭೇಟಿ ನೀಡಿದ ಸಂದರ್ಭದಲ್ಲಿ ಮನವಿ ಸಲ್ಲಿಸಿ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ, ಬಸವರಾಜ ಬೊಮ್ಮಾಯಿ, ಎಂ.ಬಿ. ಪಾಟೀಲ, ಕೆ.ಎಸ್‌. ಈಶ್ವರಪ್ಪ, ನಾಗೇಗೌಡ, ಎಚ್‌.ಕೆ. ಪಾಟೀಲ ಹೀಗೆ ಅನೇಕರು ಜಲಸಂಪನ್ಮೂಲ ಸಚಿವರಾಗಿದ್ದಾಗ ಜಿಲ್ಲೆಯ ನೀರಾವರಿ ಯೋಜನೆಗಳಿಗೆ ಕೋಟ್ಯಂತರ ರೂ. ನೀಡುತ್ತೇವೆ ಎಂದುಹೇಳಿದ್ದರು. ಆದರೆ ಯಾರೂ ರೈತರಿಗೆ ಅನುಕೂಲವಾಗುವ ಕೆಲಸ ಮಾಡಿಲ್ಲ. ಹೀಗಾಗಿ ತಾವು ನಮ್ಮ ಜಿಲ್ಲೆಯ ನೀರಾವರಿ ಯೋಜನೆಗಳ ಬಗ್ಗೆ ಮುತುವರ್ಜಿ ವಹಿಸಿ, ಅನುದಾನ ನೀಡಿ ಕಾಮಗಾರಿಗಳು ಮುಗಿಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಸುರೇಶ ಗುತ್ತೇದಾರ, ದತ್ತು ಕಾಂಬಳೆ, ರಾಜೇಂದ್ರ ಬಿರಾದಾರ, ಸುಭಾಷ ಬನಪಟ್ಟೆ, ಶಾಂತಪ್ಪ ಪಾಟೀಲ, ರಾಜಶೇಖರ ಪಾಟೀಲ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next