Advertisement

Congress; ಮನೀಶ್ ತಿವಾರಿ ಬಿಜೆಪಿಗೆ ಸೇರ್ಪಡೆ ಸುದ್ದಿ ಆಧಾರ ರಹಿತ ಎಂದ ಕಚೇರಿ

08:01 PM Feb 18, 2024 | Team Udayavani |

ಹೊಸದಿಲ್ಲಿ: ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಬಿಜೆಪಿಗೆ ಸೇರುತ್ತಾರೆ ಎಂಬ ವದಂತಿಗಳು “ಆಧಾರರಹಿತ” ಎಂದು ಅವರ ಕಚೇರಿ ಭಾನುವಾರ ತಿಳಿಸಿದೆ.

Advertisement

ಕಾಂಗ್ರೆಸ್ ಸಂಸದರು ಬಿಜೆಪಿಯೊಂದಿಗೆ ಸಂಪರ್ಕದಲ್ಲಿದ್ದಾರೆ ಮತ್ತು ಪಂಜಾಬ್‌ನ ಲೂಧಿಯಾನ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಯೋಜಿಸುತ್ತಿದ್ದಾರೆ ಎಂದು ಮೂಲಗಳು ಈ ಹಿಂದೆ ಹೇಳಿಕೆ ನೀಡಿದ ನಂತರ ಕಚೇರಿಯಿಂದ ಸ್ಪಷ್ಟನೆ ಬಂದಿದೆ.

“ಮನೀಶ್ ತಿವಾರಿ ಬಿಜೆಪಿ ಸೇರುತ್ತಾರೆ ಎಂಬ ವಿಚಾರ ಕೇವಲ ಊಹಾಪೋಹ, ಸುದ್ದಿ ಆಧಾರರಹಿತವಾಗಿದೆ. ಮನೀಶ್ ತಿವಾರಿ ಅವರು ತಮ್ಮ ಕ್ಷೇತ್ರದಲ್ಲಿದ್ದು ಅಭಿವೃದ್ಧಿ ಕೆಲಸಗಳನ್ನು ನೋಡಿಕೊಳ್ಳುತ್ತಿದ್ದಾರೆ. ನಿನ್ನೆ ರಾತ್ರಿ ಅವರು ಕಾಂಗ್ರೆಸ್ ಕಾರ್ಯಕರ್ತರ ಮನೆಯಲ್ಲಿ ತಂಗಿದ್ದರು” ಎಂದು ಕಾಂಗ್ರೆಸ್ ಸಂಸದರ ಕಚೇರಿ ತಿಳಿಸಿದೆ.

ಲೋಕಸಭೆ ಚುನಾವಣೆಗೆ ಮುನ್ನ ಮಧ್ಯಪ್ರದೇಶದ ಮಾಜಿ ಸಿಎಂ ಕಮಲ್ ನಾಥ್, ಅವರ ಪುತ್ರ ನಕುಲ್ ಮತ್ತು ಇತರ ಸಂಸದರು ಬಿಜೆಪಿ ಸೇರಬಹುದು ಎಂಬ ಊಹಾಪೋಹಗಳು ಹರಡಿರುವ ವೇಳೆ ತಿವಾರಿ ಅವರ ಹೆಸರು ಪಟ್ಟಿಯಲ್ಲಿ ಸೇರಿಕೊಂಡಿತ್ತು.

Advertisement

Udayavani is now on Telegram. Click here to join our channel and stay updated with the latest news.

Next