Advertisement

Bangladesh ಹಿಂಸೆಯಲ್ಲಿ ಪಾಕ್‌ ಕೈವಾಡ ಇದೆಯೇ?: ರಾಗಾ

11:26 PM Aug 06, 2024 | Team Udayavani |

ಹೊಸದಿಲ್ಲಿ: ಮಂಗಳವಾರ ದಿಲ್ಲಿಯಲ್ಲಿ ಬಾಂಗ್ಲಾ ಪರಿಸ್ಥಿತಿ ಕುರಿತು ನಡೆದ ಸರ್ವಪಕ್ಷ ಸಭೆಯ ವೇಳೆ, “ಬಾಂಗ್ಲಾ ದೇಶದಲ್ಲಿನ ಹಿಂಸಾಚಾರದ ಹಿಂದೆ ಪಾಕಿಸ್ಥಾನ ಸೇರಿದಂತೆ ವಿದೇಶಿ ರಾಷ್ಟ್ರಗಳ ಕೈವಾಡ ಇದೆಯೇ’ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಪ್ರಶ್ನಿಸಿದ್ದಾರೆ.

Advertisement

ಇದಕ್ಕೆ ಉತ್ತರಿಸಿರುವ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌, “ವಿದೇಶಿ ಕೈವಾಡದ ಕುರಿತ ಸುದ್ದಿಯನ್ನು ತಳ್ಳಿಹಾಕಲಾಗದು. ಈ ಬಗ್ಗೆ ಮಾಹಿತಿಗಳನ್ನು ಪರಿಶೀಲಿಸಲಾಗುತ್ತಿದೆ. ಒಟ್ಟಾರೆ ಬೆಳವಣಿಗೆಗಳ ಮೇಲೆ ನಾವು ನಿಗಾ ವಹಿಸಿದ್ದೇವೆ’ ಎಂದಿದ್ದಾರೆ.

ಇದಲ್ಲದೇ ಬಾಂಗ್ಲಾದಲ್ಲಿನ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಭಾರತ ಸರಕಾರ ಕೈಗೊಂ ಡಿರುವ ಕಾರ್ಯತಂತ್ರದ ಬಗ್ಗೆಯೂ ರಾಹುಲ್‌ ಪ್ರಶ್ನಿಸಿದ್ದಾರೆ. ಜತೆಗೆ, ಬಾಂಗ್ಲಾದಲ್ಲಿನ ಹಿಂದೂಗಳು ಸೇರಿದಂತೆ ಅಲ್ಪಸಂಖ್ಯಾಕರ ಸುರಕ್ಷತೆ ಬಗ್ಗೆಯೂ ಪ್ರಸ್ತಾವಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್‌, ವೈಎಸ್ಸಾರ್‌ ಕಾಂಗ್ರೆಸ್‌, ಜೆಡಿಯು, ಡಿಎಂಕೆ ಸೇರಿದಂತೆ ವಿಪಕ್ಷಗಳ ಎಲ್ಲ ನಾಯಕರೂ ಬಾಂಗ್ಲಾದೇಶ ವಿಚಾರದಲ್ಲಿ ಕೇಂದ್ರ ಸರಕಾರ ಕೈಗೊಳ್ಳುವ ಕ್ರಮಗಳಿಗೆ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next