Advertisement

ಶರದ್ ಮುಂದಿನ ರಾಷ್ಟ್ರಪತಿ?: ಬಿಜೆಪಿ ವಿರುದ್ಧ ಪ್ರತಿಪಕ್ಷಗಳ ಐಕ್ಯತೆ?: ಕಿಶೋರ್ ತಂತ್ರ ಏನು.?

04:52 PM Jul 14, 2021 | Team Udayavani |

ನವ ದೆಹಲಿ :  ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರ ಇತ್ತೀಚಿನ ಬೆಳವಣಿಗೆಗಳು ರಾಜಕೀಯ ಪಡಸಾಲೆಯಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

Advertisement

ಶರದ್ ಪವಾರ್ ಅವರನ್ನು ಭಾರತದ ಮುಂದಿನ ರಾಷ್ಟ್ರಪತಿಯನ್ನಾಗಿ ಆಯ್ಕೆ ಮಾಡಲು ಪ್ರಶಾಂತ್ ಕಿಶೋರ್ ಲಾಬಿ ಮಾಡುತ್ತಿದ್ದಾರೆ ಎಂಬ ವಿಷಯ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.

ಇದನ್ನೂ ಓದಿ : ಥಾವರ್ ಚಂದ್ ಸ್ಥಾನಕ್ಕೆ ರಾಜ್ಯಸಭೆಯಲ್ಲಿ ಪಿಯೂಷ್ ಗೋಯಲ್ ಬಿಜೆಪಿಯ ನೂತನ ನಾಯಕ

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣಾ ಫಲಿತಾಂಶ ಬಂದ ನಂತರ ಪ್ರಶಾಂತ್ ಕಿಶೋರ್ ಮೂರು ಬಾರಿ ಶರದ್ ಪವಾರ್ ಅವರನ್ನು ಭೇಟಿಯಾಗಿದ್ದರು.  ಶರದ್ ಪವಾರ್ ಅವರನ್ನು ಕೇಂದ್ರ ರಾಜಕಾರಣಕ್ಕೆ ತರುವ ತಂತ್ರ ಹೂಡಿಕೆಯ ಯೋಜನೆಯಲ್ಲಿ ಪ್ರಶಾಂತ್ ಕಾರ್ಯೋನ್ಮುಖವಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಮುಂದಿನ ವಿಧಾನಸಭಾ ಚುನಾವಣೆ ಮತ್ತು 2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ವಿರುದ್ಧವಾಗಿ ಪ್ರತಿಪಕ್ಷಗಳ ಐಕ್ಯತೆಯನ್ನು ಕಟ್ಟಲು ಪ್ರಯತ್ನಿಸುತ್ತಿದ್ದಾರೆ ಎಂಬ ಊಹಾಪೋಹಗಳಿಗೂ ಕೆಲವು ದಿನಗಳಿಂದ ಪ್ರಶಾಂತ್ ಕಿಶೋರ್ ರಾಷ್ಟ್ರೀಯ ನಾಯಕರೊಂದಿಗೆ  ನಡೆಸುತ್ತಿರುವ ಸಭೆಗಳು ಚರ್ಚೆಗೆ ಗ್ರಾಸವಾಗಿವೆ.

Advertisement

ಆದಾಗ್ಯೂ, 2024 ರ ಸಂಸತ್ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಪ್ರತಿಪಕ್ಷಗಳ ಒಕ್ಕೂಟಕ್ಕೆ ಪ್ರಯತ್ನ ಮಾಡುತ್ತಿದ್ದಾರೆ ಎಂಬ ಊಹಾಪೋಹಗಳನ್ನು ಪ್ರಶಾಂತ್ ನಿರಾಕರಿಸಿದ್ದು, ರಾಷ್ಟ್ರ ರಾಜಕಾರಣದಲ್ಲಿ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.

ಆದರೇ, ನಿನ್ನೆಯ (ಮಂಗಳವಾರ, ಜುಲೈ 13) ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಅವರ ಭೇಟಿ ಮುಂದಿನ ಲೋಕಸಭಾ ಚುನಾವಣೆಗೆ ಬಿಜೆಪಿ ವಿರುದ್ಧದ ರಣತಂತ್ರ ಇದು ಎಂದು ಒಂದೆಡೆ ಚರ್ಚೆಯಾದರೇ, ಇನ್ನೊಂದೆಡೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆ ನಡೆಸಿರಬಹುದು ಎಂಬ ಊಹಾಪೋಹಗಳು ಕೂಡ ಕೇಳಿಬಂದವು.

ಮುಖ್ಯಮಂತ್ರಿಗಳಾದ ಮಮತಾ ಬ್ಯಾನರ್ಜಿ, ಜಗನ್ ರೆಡ್ಡಿ, ಅರವಿಂದ್ ಕೇಜ್ರಿವಾಲ್, ಸ್ಟಾಲಿನ್ ಮತ್ತು ಉದ್ಧವ್ ಠಾಕ್ರೆ ಅವರೊಂದಿಗೆ ಉತ್ತಮ ವೈಯಕ್ತಿಕ ಸಂಬಂಧಗಳನ್ನು ಹೊಂದಿರುವ ಪ್ರಶಾಂತ್ ಕಿಶೋರ್ ಅವರಿಗೆ ಬಿಜೆಪಿ ವಿರುದ್ಧ ತಂತ್ರ ಹೂಡುವುದು ಅಷ್ಟೇನೂ ಕಷ್ಟಸಾಧ್ಯವಲ್ಲದಿದ್ದರೂ, ಕಾಂಗ್ರೆಸ್ ನೊಂದಿಗೆ ಉಳಿದೆಲ್ಲಾ ಪ್ರತಿಪಕ್ಷಗಳ ಮೈತ್ರಿಗೆ ಹೇಗೆ ಕಿಶೋರ್ ತಂತ್ರ ರೂಪಿಸುತ್ತಾರೆ ಎನ್ನುವ ಪ್ರಶ್ನೆ ಎದ್ದಿದೆ.

ಇನ್ನು, ನಿನ್ನೆ ರಾಹುಲ್ ಗಾಂಧಿ ಅವರನ್ನು ಪ್ರಶಾಂತ್ ಕಿಶೋರ್ ಅವರು ಭೇಟಿಯಾದ ಸಂದರ್ಭದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕೂಡ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗಿಯಾಗಿದ್ದರು ಎಂದು ಹೇಳಲಾಗುತ್ತಿದೆ. ಇನ್ನು, ಪ್ರಿಯಾಂಕ ಗಾಂಧಿ ಅವರು, ಕಿಶೋರ್ ಭೇಟಿಗಾಗಿಯೇ ಲಕ್ನೋ ಪ್ರವಾಸವನ್ನು ಮುಂದೂಡಿದ್ದರು ಎಂದು ವರದಿಯಾಗಿದೆ.

ಒಟ್ಟಿನಲ್ಲಿ, ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರೊಂದಿಗೆ ಪ್ರತಿಪಕ್ಷಗಳ ರಾಷ್ಟ್ರೀಯ ನಾಯಕರ ಸಭೆಗಳು ರಾಜಕೀಯ ವಲಯದಲ್ಲಿ ಹಲವು ಪ್ರಶ್ನೆಗಳನ್ನು ಎಬ್ಬಿಸಿದೆ.

ಇದನ್ನೂ ಓದಿ : ಗೋವಾದಲ್ಲಿ ಕೇಜ್ರಿವಾಲ್ ಮೈತ್ರಿ ತಂತ್ರ..?! ಚರ್ಚೆಗೆ ಆಸ್ಪದವಾದ ಧವಳೀಕರ್ ಭೇಟಿ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next