Advertisement

ಪ್ರಾಂಶುಪಾಲರಿಗೆ ಸಾಧನಾ ಕಾರ್ಯಕ್ರಮ ಕಡ್ಡಾಯ?

12:53 AM Dec 06, 2019 | mahesh |

ಬೆಂಗಳೂರು: ಬಿಜೆಪಿ ಸರಕಾರ ನೂರು ದಿನ ಪೂರೈಸಿರುವ ಹಿನ್ನೆಲೆಯಲ್ಲಿ ಕಾಲೇಜು ಶಿಕ್ಷಣ ಇಲಾಖೆ ಹಮ್ಮಿಕೊಂಡಿರುವ ಸಾಧನಾ ಕಾರ್ಯಕ್ರಮದಲ್ಲಿ ರಾಜ್ಯದ ಎಲ್ಲ ಸರಕಾರಿ ಕಾಲೇಜಿನ ಪ್ರಾಂಶುಪಾಲರು ಹಾಜರಿರಬೇಕು ಎಂಬ ಇಲಾಖೆಯ ಸುತ್ತೋಲೆಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿದೆ.

Advertisement

ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯ ಆವರಣದಲ್ಲಿರುವ ಜ್ಞಾನಜ್ಯೋತಿ ಸಭಾಂಗಣದಲ್ಲಿ ಡಿ.7ರಂದು “ಸಾಧನಾ ಕಾರ್ಯಕ್ರಮ’ ನಡೆಯಲಿದೆ. ಈ ಕಾರ್ಯ ಕ್ರಮದಲ್ಲಿ ಇಲಾಖೆಯ ಎಲ್ಲ ಪ್ರಾದೇಶಿಕ ಜಂಟಿ ನಿರ್ದೇ ಶಕರು, ಎಲ್ಲ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು, ಬೆಂಗಳೂರಿನ ಕೇಂದ್ರ ಕಚೇರಿಯ ಅಧಿಕಾರಿಗಳು ಭಾಗ ವಹಿಸಬೇಕು ಎಂದು ಇಲಾಖೆ ಸುತ್ತೋಲೆ ಹೊರಡಿಸಿ ಸೂಚನೆ ನೀಡಿದೆ.

ಸರಕಾರದ ಈ ನಡೆ ಬಗ್ಗೆ ಆಕ್ಷೇಪ ವ್ಯಕ್ತ ಡಿಸಿರುವ ಶಿಕ್ಷಣ ತಜ್ಞರೊಬ್ಬರು, ಸಾಧನಾ ಕಾರ್ಯಕ್ರಮಗಳಿಗೆ ಬರುವಂತೆ ಪ್ರಾಂಶು ಪಾಲರಿಗೆ ಸೂಚನೆ ನೀಡುವುದು ಸರಿಯಲ್ಲ. ಯಾವುದೇ ಸರಕಾರ ಬಂದರೂ ಅವರ ಕಾರ್ಯದಲ್ಲಿ ವ್ಯತ್ಯಾಸವಾಗುವುದಿಲ್ಲ ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next