Advertisement

ಪೊಲೀಸ್, ಕೋರ್ಟ್ ಅಗತ್ಯವಿಲ್ಲವೇ? PM ಏಕಪಕ್ಷೀಯ ತೀರ್ಮಾನವೇ ಅಂತಿಮವೇ? ಸಿದ್ದರಾಮಯ್ಯ ಪ್ರಶ್ನೆ

02:29 PM Nov 12, 2021 | Team Udayavani |

ಬೆಂಗಳೂರು: ಆರೋಪದ ತನಿಖೆ ನಡೆಸಿ ನಿಮ್ಮ ಮೇಲಿನ ಆರೋಪವನ್ನು ಸುಳ್ಳೆಂದು ಸಾಬೀತುಪಡಿಸಿ ಎಂದು ಹೇಳಬೇಕಾಗಿದ್ದ ಪ್ರಧಾನಿ ಮೋದಿ, ಆರೋಪವನ್ನೇ ನಿರ್ಲಕ್ಷಿಸಿ ಎಂದು ಹೇಳಿದರೆ ಹೇಗೆ? ಅಪರಾಧ ಪ್ರಕರಣಗಳ ತನಿಖೆಗೆ ಪೊಲೀಸ್ ಇಲಾಖೆ, ನ್ಯಾಯಾಲಯಗಳ ಅಗತ್ಯ ಇಲ್ಲವೇ? ಪ್ರಧಾನಮಂತ್ರಿಯವರ ಏಕಪಕ್ಷೀಯ ತೀರ್ಮಾನವೇ ಅಂತಿಮವೇ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

Advertisement

ಭೇಟಿ ವೇಳೆ ಪ್ರಧಾನಿ ಮೋದಿ ಅವರು ಸಿಎಂ ಬೊಮ್ಮಾಯಿ ಅವರಿಗೆ ಬಿಟ್ ಕಾಯಿನ್ ವಿಚಾರದ ಆರೋಪವನ್ನು ನಿರ್ಲಕ್ಷಿಸಿ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ:ಇನ್ನು ಮುಂದೆ ಬಸ್ ನಲ್ಲಿ ಪ್ರಯಾಣಿಕರು ಮೊಬೈಲ್ ನಲ್ಲಿ ಹಾಡು ಹಾಕುವಂತಿಲ್ಲ: ಆದೇಶ

ಬಿಟ್ ಕಾಯಿನ್ ಹಗರಣದ ಬಗ್ಗೆ ಕೇಂದ್ರ/ರಾಜ್ಯ ಸರ್ಕಾರಗಳ ತನಿಖಾ ಸಂಸ್ಥೆಗಳಿಂದಲೇ ತನಿಖೆ ನಡೆಯುತ್ತಿದೆ. ಬಸವರಾಜ ಬೊಮ್ಮಾಯಿಯವರು ಈಗಿನ ಮುಖ್ಯಮಂತ್ರಿಗಳು ಮಾತ್ರ ಅಲ್ಲ ಹಿಂದಿನ ಗೃಹಮಂತ್ರಿಗಳು ಹೌದು. ಈ ಹಂತದಲ್ಲಿ ಪ್ರಧಾನ ಮಂತ್ರಿಗಳು ಆರೋಪವನ್ನು ನಿರ್ಲಕ್ಷಿಸಿ ಎಂದರೆ ತನಿಖೆಯನ್ನು ಕೈಬಿಡಿ ಎಂದಾಗುವುದಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಬಿಟ್ ಕಾಯಿನ್ ಹಗರಣದಲ್ಲಿ ಬಸವರಾಜ ಬೊಮ್ಮಾಯಿ ಭಾಗಿಯೋ ಇಲ್ಲವೋ ನಮಗೆ ಗೊತ್ತಿಲ್ಲ, ಅವರು ಅಪರಾಧಿಗಳೆಂದು ಯಾರೂ ಹೇಳಿಲ್ಲ. ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರನ್ನು ಶಿಕ್ಷಿಸಿ ಎಂದಷ್ಠೇ ನಾನು ಮತ್ತು ನಮ್ಮ ಪಕ್ಷದ ನಾಯಕರು ಹೇಳುತ್ತಿರುವುದು. ತನಿಖೆ ನಡೆಸಲು ಹಿಂಜರಿಕೆ ಯಾಕೆ? ಕಾಂಗ್ರೆಸ್ ನಾಯಕರ ಹೆಸರು ಇದೆ ಎಂದು ಹೇಳಿ ನಮ್ಮ ಬಾಯಿ ಮುಚ್ಚಿಸಲು ಪ್ರಯತ್ನ ಮಾಡಬೇಡಿ. ಕೇಂದ್ರ ಮತ್ತು ರಾಜ್ಯಗಳಲ್ಲಿ ನಿಮ್ಮದೇ ಸರ್ಕಾರ ಇದೆ. ತನಿಖೆ ನಡೆಸಿ ಅಪರಾಧಿಗಳನ್ನು ಬಯಲಿಗೆಳೆಯಿರಿ, ಅವರೆಲ್ಲ ಯಾವ ಪಕ್ಷದವರು ಎನ್ನುವುದನ್ನು ಆ ಮೇಲೆ ನೋಡಿಕೊಳ್ಳೋಣ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next