Advertisement

Bengalur Kambala ನೋಡಲು ಪ್ರವೇಶ ಶುಲ್ಕವಿದೆಯೇ? ಟಿಕೆಟ್ ಕಾಯ್ದಿರಿಸಬೇಕೆ? ಇಲ್ಲಿದೆ ಮಾಹಿತಿ

11:38 AM Nov 21, 2023 | Team Udayavani |

ಮಣಿಪಾಲ/ಬೆಂಗಳೂರು: ಇದೇ ಮೊದಲ ಬಾರಿಗೆ ಕರಾವಳಿಯ ಜನಪದ ಕ್ರೀಡೆ ಕಂಬಳವು ರಾಜಧಾನಿ ಬೆಂಗಳೂರಿನಲ್ಲಿ ನಡೆಯುತ್ತಿವೆ. ನವೆಂಬರ್ 25 ಮತ್ತು 26ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರಾವಳಿಯ ಸಾಂಸ್ಕೃತಿಕ ಸೊಗಡು ಅನಾವರಣವಾಗಲಿದೆ. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಐತಿಹಾಸಿಕ ಕಂಬಳ ಕೂಟಕ್ಕೆ ಬೆಂಗಳೂರು ಸಜ್ಜಾಗಿದೆ.

Advertisement

ನ.23ರಂದು ಕರಾವಳಿಯಿಂದ ನೂರೈವತ್ತಕ್ಕೂ ಹೆಚ್ಚು ಜೋಡಿ ಕಂಬಳ ಕೋಣಗಳು ರಾಜಧಾನಿಯೆಡೆಗೆ ಪ್ರಯಾಣ ಬೆಳೆಸಲಿದೆ. ಉಪ್ಪಿನಂಗಡಿಯಿಂದ ಹೊರಟು ಹಾಸನದಲ್ಲಿ ವಿರಾಮ ತೆಗೆದುಕೊಂಡು ಬಳಿಕ ನೆಲಮಂಗಲ ಮೂಲಕವಾಗಿ ಕೋಣಗಳು ಮತ್ತು ಯಜಮಾನ ಸೇರಿ ಪರಿಚಾರಕರು ಬೆಂಗಳೂರು ಪ್ರವೇಶಿಸಲಿದ್ದಾರೆ.

ಪ್ರವೇಶ ಶುಲ್ಕವಿದೆಯೇ?: ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಕಂಬಳ ಕೂಟ ನಡೆಯುತ್ತಿದೆ. ರಾಜಧಾನಿ ಕಂಬಳ ವೀಕ್ಷಣೆಗೆ ಪ್ರೇಕ್ಷಕರಿಗೆ ಪ್ರವೇಶ ಶುಲ್ಕವಿದೆಯೇ ಎಂಬ ಪ್ರಶ್ನೆಗಳು ಹಲವರಿಗೆ ಕಾಡುತ್ತಿದೆ. ಇದಕ್ಕೀಗ ಬೆಂಗಳೂರು ಕಂಬಳ ಸಮಿತಿ ಕಾರ್ಯಾಧ್ಯಕ್ಷರು ಮುರಳೀಧರ ರೈ ಮಠಂತಬೆಟ್ಟು ಅವರು ಸ್ಪಷ್ಟನೆ ನೀಡಿದ್ದಾರೆ.

“ಬೆಂಗಳೂರು ಕಂಬಳ ವೀಕ್ಷಣೆಗೆ ಪ್ರವೇಶ ಶುಲ್ಕವಿದೆ, ಮುಂಗಡ ಟಿಕೆಟ್ ಬುಕ್ಕಿಂಗ್ ಮಾಡಬೇಕು ಎಂಬ ಸುದ್ದಿಯನ್ನು ನಾವು ಗಮನಿಸಿದ್ದೇವೆ. ಆದರೆ ಇದು ಸತ್ಯಕ್ಕೆ ದೂರವಾದ ಸುದ್ದಿ. ಅಭಿಮಾನಿಗಳು ಇದನ್ನು ನಂಬಬಾರದು. ಬೆಂಗಳೂರು ಕಂಬಳಕ್ಕೆ ಯಾವುದೇ ಟಿಕೆಟ್ ಇರುವುದಿಲ್ಲ, ಪ್ರವೇಶ ಶುಲ್ಕ ಇರುವುದಿಲ್ಲ. ಎಲ್ಲಾ ಅಭಿಮಾನಿಗಳಿಗೆ, ಪ್ರೇಕ್ಷಕರಿಗೆ ಇದು ಸಂಪೂರ್ಣ ಮುಕ್ತವಾಗಿರುತ್ತದೆ” ಎಂದು ಮುರಳೀಧರ ರೈ ಮಠಂತಬೆಟ್ಟು ಉದಯವಾಣಿಗೆ ಹೇಳಿದ್ದಾರೆ.

Advertisement

ವಿಶಾಲವಾದ 70 ಎಕರೆ ಸ್ಥಳವಿರುವ ಅರಮನೆ ಮೈದಾನದ ಗೇಟ್‌ 5ರಲ್ಲಿ ಕಂಬಳ ಕ್ರೀಡಾಕೂಟ ನಡೆಯಲಿದೆ. ನ.25ರಂದು ಕಂಬಳಕ್ಕೆ ಚಾಲನೆ ಸಿಗಲಿದೆ. ಅಂದು ಬೆಳಗ್ಗೆ 10.30ರಿಂದ ನ.26ರ ಸಂಜೆವರೆಗೆ ನಿರಂತರವಾಗಿ ಕಂಬಳ ನಡೆಯಲಿದೆ.

ಮೊದಲ ಬಾರಿಗೆ ಸಿಲಿಕಾನ್‌ ಸಿಟಿಯಲ್ಲಿ ಕಂಬಳ ನಡೆಯುತ್ತಿರುವ ಹಿನ್ನೆಲೆಯಲ್ಲಿ 5 ರಿಂದ 8 ಲಕ್ಷ ಜನರು ಬರುವ ನಿರೀಕ್ಷೆ ಇದೆ. ಕರಾವಳಿಯಿಂದ ಉದ್ಯೋಗ ಅರಿಸಿಕೊಂಡ ಬಂದವರು ಹಾಗೂ ಕಂಬಳ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲಿದ್ದಾರೆ. ಬಂದವರಿಗೆ ಕಂಬಳ ವೀಕ್ಷಣೆಗೆ ಬೇಕಾದ ವಿವಿಐಪಿಗಳಿಗೆ 10,000 ಆಸನದ ವ್ಯವಸ್ಥೆಯನ್ನು ಸಹ ಕಲ್ಪಿಸಲಿದ್ದಾರೆ. ಜತೆಗೆ ಸಾರ್ವಜನಿಕರು ಕಂಬಳವನ್ನು ಕರಾವಳಿ ಗ್ರಾಮೀಣ ಭಾಗದಲ್ಲಿ ವೀಕ್ಷಿಸುವ ಶೈಲಿಯಲ್ಲಿ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next