Advertisement

ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ತಾರಾ ಸಂಸದ ವರುಣ್ ಗಾಂಧಿ?

06:22 PM Jan 08, 2023 | Team Udayavani |

ನವದೆಹಲಿ: ಉತ್ತರ ಪ್ರದೇಶದ ಪಿಲಿಭಿತ್‌ನ ಬಿಜೆಪಿ ಸಂಸದ ವರುಣ್ ಗಾಂಧಿ ಕಾಂಗ್ರೆಸ್ ಸೇರುವ ಸುದ್ದಿ ಭಾರಿ ಸದ್ದು ಮಾಡುತ್ತಿದೆ. ಈ ವಿಚಾರ ಯುಪಿಯಲ್ಲಿ ರಾಜಕೀಯ ಸಂಚಲನವನ್ನು ತೀವ್ರಗೊಳಿಸಿದೆ. ಭಾರತ್ ಜೋಡೋ ಯಾತ್ರೆಯ ನೇತೃತ್ವ ವಹಿಸಿರುವ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ಹೇಳಿಕೆಯಿಂದ ಈ ಚರ್ಚೆ ತೀವ್ರಗೊಂಡಿದೆ.

Advertisement

ವಾಸ್ತವವಾಗಿ, ವರುಣ್ ಗಾಂಧಿ ಅವರು ತಮ್ಮ ಸೋದರಸಂಬಂಧಿ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರೊಂದಿಗೆ ಮಾತನಾಡುತ್ತಾರೆ ಎಂದು ಮೂಲಗಳು ಹೇಳುತ್ತವೆ. ಮೊದಲು ಈ ಸಂಭಾಷಣೆ ಕುಟುಂಬದಲ್ಲಿ ನಡೆಯುತ್ತಿತ್ತು ಎನ್ನಲಾಗಿದ್ದರೂ ಇದೀಗ ರಾಜಕೀಯ ತಿರುವು ಪಡೆದುಕೊಂಡಿದೆ. 2024ರ ಲೋಕಸಭೆ ಚುನಾವಣೆಗೂ ಮುನ್ನ ವರುಣ್ ಗಾಂಧಿ ತಮ್ಮ ರಾಜಕೀಯ ಭವಿಷ್ಯವನ್ನು ಭದ್ರಪಡಿಸಿಕೊಳ್ಳಲು ಪ್ರಯತ್ನಿಸಲಿದ್ದಾರೆ ಎಂದು ರಾಜಕೀಯ ಪಂಡಿತರು ಹೇಳಿಕೊಂಡಿದ್ದಾರೆ. ಇದಕ್ಕಾಗಿ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲಿದ್ದಾರೆ ಎಂಬ ಮಾತುಗಳು ಹರಿದಾಡುತ್ತಿವೆ.

ರಾಹುಲ್ ಗಾಂಧಿ ಹೇಳಿಕೆಯಿಂದಾಗಿ ವರುಣ್ ಗಾಂಧಿ ಕಾಂಗ್ರೆಸ್ ಸೇರುವ ಸುದ್ದಿಯ ಚರ್ಚೆ ತೀವ್ರಗೊಂಡಿದೆ. ವರುಣ್ ಗಾಂಧಿ ಕಾಂಗ್ರೆಸ್ ಸೇರುವ ಬಗ್ಗೆ ಕೇಳಿದ ಪ್ರಶ್ನೆಗೆ, ವರುಣ್ ಗಾಂಧಿ ಪಕ್ಷಕ್ಕೆ ಸೇರುತ್ತಾರೋ ಇಲ್ಲವೋ ಎಂದು ಖರ್ಗೆ ಜೀ ಅವರನ್ನು ಕೇಳಿ, ಭಾರತ್ ಜೋಡೋ ಯಾತ್ರೆಯಲ್ಲಿ ಅವರು ಸೇರಿದಂತೆ ಎಲ್ಲರಿಗೂ ಸ್ವಾಗತ ಆದರೆ ವರುಣ್ ಬಿಜೆಪಿಯಲ್ಲಿರುವುದರಿಂದ ಅಲ್ಲಿ ಅವರಿಗೆ ಹಲವಾರು ಸಮಸ್ಯೆಗಳಿವೆ ಎಂದು ಹೇಳಿದ್ದಾರೆ.

ಮತ್ತೊಂದೆಡೆ, ಈ ಹಿಂದೆಯೇ ವರುಣ್ ಗಾಂಧಿ ಈ ಬಗ್ಗೆ ಸೂಚನೆ ನೀಡಿದ್ದರು, “ಈ ದೇಶವನ್ನು ಒಗ್ಗೂಡಿಸಲು ರಾಜಕೀಯ ಬೇಕು, ಆದರೆ ಅದನ್ನು ಒಡೆಯಲು ಅಲ್ಲ, ಜಾತಿ ಧರ್ಮದ ಹೆಸರಿನಲ್ಲಿ ಮತಗಳಿಸುತ್ತಿರುವ ಜನಪ್ರತಿನಿಧಿಗಳು ಜನರ ಉದ್ಯೋಗ, ಶಿಕ್ಷಣ, ಆರೋಗ್ಯದಂತಹ ಗಂಭೀರ ವಿಷಯಗಳ ಬಗ್ಗೆ ಏನು ಮಾಡುತ್ತಿದ್ದಾರೆ ಎಂಬುದು ತಿಳಿದುಕೊಳ್ಳಬೇಕಾಗಿದೆ, ಜನರನ್ನು ತುಳಿಯುವ ಬದಲು ಅವರನ್ನು ಮೇಲಕ್ಕೆತ್ತುವ ಕೆಲಸ ಆಗಬೇಕಾಗಿದೆ ಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಕುತ್ತಾರು: ಬೈಕ್ ಅಪಘಾತದಲ್ಲಿ ಯುವಕನ ಮಿದುಳು ನಿಷ್ಕ್ರಿಯ, ಕುಟುಂಬಸ್ಥರಿಂದ ಅಂಗಾಂಗ ದಾನ

Advertisement
Advertisement

Udayavani is now on Telegram. Click here to join our channel and stay updated with the latest news.

Next