Advertisement

ಸರ್ಕಾರದ ಬೊಕ್ಕಸ ಖಾಲಿ: ಈಶ್ವರ್‌ ಖಂಡ್ರೆ ಆರೋಪ

06:45 AM May 15, 2020 | mahesh |

ಬೆಂಗಳೂರು: ರಾಜ್ಯ ಸರ್ಕಾರದ ಬೊಕ್ಕಸ ಬರಿದಾಗಿದ್ದು, ತನ್ನ ನೌಕರರಿಗೆ ವೇತನ ಬಿಡುಗಡೆ ಮಾಡಿಲ್ಲ. ಯಾವುದೇ ಕೆಲಸಗಳಿಗೂ ಹಣ ಬಿಡುಗಡೆಯಾಗುತ್ತಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ ಆರೋಪಿಸಿದ್ದಾರೆ.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಸರ್ಕಾರದಲ್ಲಿ ಆರ್ಥಿಕ ಸಂಕಷ್ಟ ಇದ್ದರೂ ಕೇಂದ್ರ ಸರ್ಕಾರ ರಾಜ್ಯದತ್ತ ತಿರುಗಿ ನೋಡಿಲ್ಲ. ರಾಜ್ಯಕ್ಕೆ ಬರಬೇಕಾದ ಅನುದಾನ ವನ್ನೇ
ನೀಡಿಲ್ಲ. ಕೇಂದ್ರ ಇತ್ತೀಚೆಗೆ ಅನುದಾನ ಬಿಡುಗಡೆ ಮಾಡಿದ ರಾಜ್ಯಗಳಲ್ಲಿ ಕರ್ನಾಟಕದ ಹೆಸರಿಲ್ಲ ಎಂದರು. ಕೋವಿಡ್ ಪರಿಹಾರ ವಿತರಣೆಯಲ್ಲಿ ಕೇಂದ್ರ ಸಂಪೂರ್ಣ ವಿಫಲವಾಗಿದೆ. ಬೆಟ್ಟ ಅಗೆದು ಇಲಿ ಹಿಡಿ ದಂತಾಗಿದೆ. ಬರೀ ಮಾಯಾಬಜಾರ್‌ ತೋರಿಸಿ ಜನರನ್ನು ಯಾಮಾರಿಸುವ ಕೆಲಸ ವಾಗುತ್ತಿದೆ ಎಂದು ಟೀಕಿಸಿದರು. ಎಪಿಎಂಸಿ ತಿದ್ದುಪಡಿ ಕಾಯ್ದೆಗೆ ತಿದ್ದುಪಡಿ ತರಲು ಹೊರಟಿರುವುದು ಆರ್ಥಿಕತೆಯ ಮೇಲೆ ಹೊಡೆತ ನೀಡಲಿದೆ. ಸದನದಲ್ಲಿ ಚರ್ಚೆಯಾಗದೆ ಕಾಯ್ದೆ ಜಾರಿ ಮಾಡಬಾರದು.

ಬಹುರಾಷ್ಟ್ರೀಯ ಕಂಪನಿಗಳ ಪರ ಕೇಂದ್ರ ನಿಂತಿದೆ. ರೈತರ ವಿರುದ್ಧ ನೀತಿಗಳನ್ನ ಜಾರಿಗೆ ತರುತ್ತಿದೆ. ಇದರ ವಿರುದ್ಧ ಕಾಂಗ್ರೆಸ್‌ ಹೋರಾಟ ಮಾಡಲಿದೆ ಎಂದು ಎಚ್ಚರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next