Advertisement

ಕೊಟ್ಟ ಮಾತಿನಂತೆ ನಡೆಯದ ಪ್ರಧಾನಿ: ಖಂಡ್ರೆ

11:40 AM Nov 14, 2019 | Sriram |

ರಾಯಚೂರು: ನಮ್ಮದು ರೈತ ಪರ ಸರಕಾರ, ರೈತರ ಆದಾಯ ದ್ವಿಗುಣ ಮಾಡುತ್ತೇವೆ ಎಂದೆಲ್ಲ ಭರವಸೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಈವರೆಗೂ ಯಾವೊಂದು ಭರವಸೆ ಈಡೇರಿಸಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಆರೋಪಿಸಿದರು.

Advertisement

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೆರೆಯಿಂದ ರಾಜ್ಯದಲ್ಲಿ 25 ಲಕ್ಷ ಎಕರೆಗೂ ಅ ಧಿಕ ಬೆಳೆ ಹಾನಿಯಾಗಿದೆ. ಆದರೆ ರೈತರಿಗೆ ಪರಿಹಾರ ಸಿಕ್ಕಿಲ್ಲ. ಫಸಲ್‌ ಬಿಮಾ ಯೋಜನೆಯಿಂದ ವಿಮಾ ಕಂಪೆನಿಗಳಿಗೆ ಲಾಭವಾಗಿದೆ ವಿನಾ ರೈತರಿಗೆ ಮಾತ್ರ ಯಾವುದೇ ಪ್ರಯೋಜನವಾಗಿಲ್ಲ. ರಾಜ್ಯ ಸರಕಾರ ಆರಂಭಿಸಿರುವ ಖರೀದಿ ಕೇಂದ್ರಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ರೈತರನ್ನು ವಂಚಿಸಲಾಗುತ್ತಿದೆ ಎಂದವರು ದೂರಿದರು.

Advertisement

Udayavani is now on Telegram. Click here to join our channel and stay updated with the latest news.

Next