Advertisement

ಈಶ್ವರಮಂಗಲ: ಹನುಮಗಿರಿ ಕ್ಷೇತ್ರ ಸಮೀಪವಿರುವ ಅಂಗಡಿಯಲ್ಲಿ ಅಗ್ನಿ ಅವಘಡ

12:03 PM Apr 02, 2022 | Team Udayavani |

ಈಶ್ವರಮಂಗಲ:  ಹನುಮಗಿರಿ ಕ್ಷೇತ್ರದ ಸಮೀಪವಿರುವ ಶ್ರೀ ಪಂಚಮುಖಿ ಆಂಜನೇಯ ಹಣ್ಣುಕಾಯಿ ಅಂಗಡಿ ಹಾಗೂ ಫ್ಯಾನ್ಸಿ ಅಂಗಡಿ ಶನಿವಾರ ಮುಂಜಾನೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿಗೆ ಆಹುತಿಯಾಗಿದೆ.

Advertisement

ಪಡುವನ್ನೂರು ಗ್ರಾಮದ ಕರ್ಪೂಡಿಕಾನ ನಿವಾಸಿ ಧನಂಜಯ ಗೌಡ ಎಂಬವರು 11 ವರ್ಷದಿಂದ ನಡೆಸುತ್ತಿರುವ ಹಣ್ಣುಕಾಯಿ ಅಂಗಡಿ ಜೊತೆಯಲ್ಲಿ ಫ್ಯಾನ್ಸಿ ವಸ್ತುಗಳನ್ನು ಮಾರಾಟ ಮಾಡುತ್ತಿದ್ದರು. ಮುಂಜಾನೆ 2 ಗಂಟೆಗೆ ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದ್ದಾರೆ.

ಇದನ್ನೂ ಓದಿ:ಜಮ್ಮು ಮತ್ತು ಕಾಶ್ಮೀರದಲ್ಲಿ 25 ರೋಹಿಂಗ್ಯಾಗಳು ಪೋಲೀಸರ ವಶಕ್ಕೆ

ಅಂಗಡಿಯು ಸಂಪೂರ್ಣ ಬೆಂಕಿಗೆ ಆಹುತಿಯಾಗಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಪೊಲೀಸ್ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.  ಸುಮಾರು 8ಲಕ್ಷ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ ಎಂದು ಅಂದಾಜಿಸಲಾಗಿದೆ.

Advertisement

Advertisement

Udayavani is now on Telegram. Click here to join our channel and stay updated with the latest news.

Next