Advertisement

ನೆತನ್ಯಾಹು ಪ್ರವಾಸ ಮುಂದೂಡಿಕೆ

11:54 PM Sep 04, 2019 | Sriram |

ಟೆಲ್‌ಅವೀವ್‌/ಬೀಜಿಂಗ್‌: ಭಾರತ ಪ್ರವಾಸ ಕೈಗೊಳ್ಳಬೇಕಾಗಿದ್ದ ಇಬ್ಬರು ಪ್ರಮುಖ ರಾಷ್ಟ್ರಗಳ ನಾಯಕರು ತಮ್ಮ ಪ್ರವಾಸ ಮುಂದೂಡಿದ್ದಾರೆ. ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಚುನಾವಣೆ ಹಿನ್ನೆಲೆಯಲ್ಲಿ ಸೆ.9ರಂದು ಕೈಗೊಳ್ಳಬೇಕಾಗಿದ್ದ ಹೊಸದಿಲ್ಲಿ ಪ್ರವಾಸವನ್ನು ಮುಂದೂಡಿದ್ದಾರೆ.

Advertisement

ಈ ವರ್ಷದ ಎಪ್ರಿಲ್‌ನಲ್ಲಿ ಕೂಡ ಆ ದೇಶದಲ್ಲಿ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಪ್ರವಾಸ ಮುಂದೂಡಿದ್ದರು. ಸೆ.17ರಂದು ಚುನಾವಣೆ ಬಳಿಕ ಭಾರತ ಪ್ರವಾಸ ಕೈಗೊಳ್ಳುವ ಸಾಧ್ಯತೆ ಇದೆ. ಇದೇ ವೇಳೆ, ಚೀನ ವಿದೇಶಾಂಗ ಸಚಿವ ವಾಂಗ್‌ ಇ ಸೆ.9-10ರ ವರೆಗೆ ಕೈಗೊಳ್ಳಬೇಕಾಗಿದ್ದ ಹೊಸದಿಲ್ಲಿ ಪ್ರವಾಸವನ್ನು ಮುಂದೂಡಿದ್ದಾರೆ. ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ ಜತೆಗೆ ಗಡಿ ವಿಚಾರ ಕುರಿತಂತೆ ಚೀನ ಸಚಿವ ಮಾತುಕತೆ ನಡೆಸಬೇಕಾಗಿತ್ತು. ಆದರೆ ಅವರು ನಿಗದಿಯಂತೆ ಶನಿವಾರ ಇಸ್ಲಾಮಾಬಾದ್‌ಗೆ ಭೇಟಿ ನೀಡಿಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next