Advertisement
ಮರ್ಣೆ ಗ್ರಾ.ಪಂ. ಸಭಾಭವನದಲ್ಲಿ ಮರ್ಣೆ, ವರಂಗ, ಕಡ್ತಲ ಪಂ. ವ್ಯಾಪ್ತಿಯ ರೈತರೊಡನೆ ಸಂವಾದ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಸುನಿಲ್ ಕುಮಾರ್ ಸ್ಥಳೀಯ ಕೃಷಿ ಪದ್ಧತಿ, ನೀರಾವರಿ ಯೋಜನೆ ಹಾಗೂ ಇಸ್ರೇಲ್ ತಂತ್ರಜ್ಞಾನ ಅಳವಡಿಸುವ ಬಗ್ಗೆ ಹೆಚ್ಚಿನ ಅಧ್ಯಯನ ಅಗತ್ಯ ಎಂದರು.
ಕಾರ್ಕಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿ ಯಲ್ಲಿ ಕೃಷಿಗೆ ಹೆಚ್ಚಿನ ಒತ್ತು ನೀಡುವ ಉದ್ದೇಶದೊಂದಿಗೆ ಕಳೆದ ವರ್ಷ 57 ಕಿಂಡಿ ಅಣೆಕಟ್ಟುಗಳನ್ನು ನಿರ್ಮಿಸಲಾಗಿದೆ ಎಂದರು. ಎಣ್ಣೇಹೊಳೆ ನೀರಾವರಿ ಯೋಜನೆ
ಮರ್ಣೆ, ಎರ್ಲಪಾಡಿ, ಹಿರ್ಗಾನ ಗ್ರಾಮಗಳ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸುವರ್ಣಾ ನದಿಗೆ ಅಣೆಕಟ್ಟು ನಿರ್ಮಿಸುವಂತೆ ಕಳೆದ 3 ವರ್ಷಗಳಿಂದ ನಿರಂತರ ಸರಕಾರಕ್ಕೆ ಒತ್ತಾಯ ಮಾಡುತ್ತಾ ಬಂದಿದ್ದು ಇದೀಗ ಬಜೆಟ್ನಲ್ಲಿ ರಾಜ್ಯ ಸರಕಾರ 40 ಕೋಟಿ ರೂ. ಅನುದಾನ ನೀಡಿರುವುದರಿಂದ ಈ ಭಾಗದ ಕೃಷಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.
Related Articles
Advertisement
ಜಿ.ಪಂ. ಸದಸ್ಯೆ ಜ್ಯೋತಿ ಹರೀಶ್, ತಾ.ಪಂ. ಸದಸ್ಯ ಹರೀಶ್ ನಾಯಕ್, ಮರ್ಣೆ ಪಂ. ಅಧ್ಯಕ್ಷ ದಿನೇಶ್ ಕುಮಾರ್, ವರಂಗ ಪಂ. ಅಧ್ಯಕ್ಷ ಸುರೇಂದ್ರ ಶೆಟ್ಟಿ, ತೋಟಗಾರಿಕಾ ಹಿರಿಯ ನಿರ್ದೇಶಕ ಶ್ರೀನಿವಾಸ ರಾವ್, ಪಿಡಿ ಒ ತಿಲಕರಾಜ್, ಕಾರ್ಯದರ್ಶಿ ಶ್ರೀನಿವಾಸ ಉಪಸ್ಥಿತರಿದ್ದರು.