Advertisement

Aditya-L1 ;ಆಂಧ್ರದ ಚೆಂಗಾಲಮ್ಮ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಎಸ್. ಸೋಮನಾಥ್

09:37 PM Sep 01, 2023 | Team Udayavani |

ಸುಳ್ಳೂರುಪೇಟೆ: ಮಹತ್ವಾಕಾಂಕ್ಷೆಯ ಆದಿತ್ಯ-ಎಲ್‌1 ಮಿಷನ್‌ ಉಡಾವಣೆಯ ಪೂರ್ವಭಾವಿಯಾಗಿ ಇಸ್ರೋ ಅಧ್ಯಕ್ಷ ಎಸ್‌.ಸೋಮನಾಥ್ ವರು ಶುಕ್ರವಾರ ಸುಳ್ಳೂರುಪೇಟೆಯ ಶ್ರೀ ಚೆಂಗಾಲಮ್ಮ ಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಯಶಸ್ಸಿಗೆ ಪ್ರಾರ್ಥಿಸಿದರು.

Advertisement

ಸೋಮನಾಥ ಅವರು ಬೆಳಗ್ಗೆ 7.30ಕ್ಕೆ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಸುದ್ದಿಗಾರರೊಂದಿಗೆ ಮಾತನಾಡಿದ ಇಸ್ರೋ ಮುಖ್ಯಸ್ಥರು, ಶನಿವಾರ ಬೆಳಗ್ಗೆ 11.50ಕ್ಕೆ ಆದಿತ್ಯ ಮಿಷನ್‌ಗೆ ಚಾಲನೆ ನೀಡಲಾಗುವುದು.ಸೌರ ಮಿಷನ್ ಸೂರ್ಯನನ್ನು ಅಧ್ಯಯನ ಮಾಡಲು ಮತ್ತು ನಿಖರವಾದ ತ್ರಿಜ್ಯವನ್ನು ತಲುಪಲು 125 ದಿನಗಳನ್ನು ತೆಗೆದುಕೊಳ್ಳುತ್ತದೆ ಎಂದು ಹೇಳಿದರು.

ಚಂದ್ರಯಾನ-3 ಮಿಷನ್ ನಲ್ಲಿ ಎಲ್ಲವೂ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಸನ್ ಅಬ್ಸರ್ವೇಟರಿ ಮಿಷನ್ ನಂತರ, ಬಾಹ್ಯಾಕಾಶ ಸಂಸ್ಥೆಯು ಮುಂದಿನ ದಿನಗಳಲ್ಲಿ SSLV – D3 ಮತ್ತು PSLV ಸೇರಿದಂತೆ ಹಲವಾರು ಇತರ ಉಡಾವಣೆಗಳನ್ನು ಮಾಡಲಿದೆ ಎಂದು ಹೇಳಿದರು.

ಚೆಂಗಾಲಮ್ಮ ಪರಮೇಶ್ವರಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಿವಾಸ್ ರೆಡ್ಡಿ ಪಿಟಿಐ ನೊಂದಿಗೆ ಮಾತನಾಡಿ, ಇಸ್ರೋ ಅಧಿಕಾರಿಗಳು ರಾಕೆಟ್ ಉಡಾವಣೆಗೂ ಮುನ್ನ ಈ ದೇವಾಲಯಕ್ಕೆ ಭೇಟಿ ನೀಡುವುದು ಸಂಪ್ರದಾಯವಾಗಿದೆ, ಇದು 15 ವರ್ಷಗಳ ಹಿಂದಿನಿಂದ ನಡೆದುಕೊಂಡು ಬಂದಿದೆ. ಸೋಮನಾಥ್ ಅವರು ಚಂದ್ರಯಾನ-3 ಮಿಷನ್‌ನ ಮುನ್ನಾದಿನದಂದು ದೇವಾಲಯಕ್ಕೆ ಭೇಟಿ ನೀಡಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next