Advertisement

ಇಸ್ರೋ ಗೂಢಚರ್ಯೆ ಪ್ರಕರಣ‌ : ಸಿಬಿಐನಿಂದ ವಿಸ್ತೃತ ತನಿಖೆ ನಡೆಸಲು ಸುಪ್ರೀಂ ಆದೇಶ

08:15 PM Apr 15, 2021 | Team Udayavani |

ನವದೆಹಲಿ: ಇಸ್ರೋದಲ್ಲಿ 1994ರಲ್ಲಿ ಬೆಳಕಿಗೆ ಬಂದ ಗೂಢಚರ್ಯೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐನಿಂದ ಮತ್ತಷ್ಟು ತನಿಖೆಗೆ ಸುಪ್ರೀಂ ಕೋರ್ಟ್‌ ಆದೇಶಿಸಿದೆ.

Advertisement

ಈ ಪ್ರಕರಣದಲ್ಲಿ ನಿವೃತ್ತ ವಿಜ್ಞಾನಿ ನಂಬಿ ನಾರಾಯಣನ್‌ ಶಾಮೀಲಾಗಿದ್ದರು ಎಂಬ ಆರೋಪಕ್ಕೆ ಗುರಿಯಾಗಿದ್ದರು. ಅಲ್ಲದೆ, ಅವರನ್ನು ಪೊಲೀಸರು ಬಂಧಿಸಿ, ಚಿತ್ರಹಿಂಸೆ ನೀಡಿದ್ದರು ಎಂದು ಆರೋಪಕ್ಕೆ ಸಂಬಂಧಿಸಿ ಇತ್ತೀಚೆಗೆ ಉನ್ನತ ಮಟ್ಟದ ಸಮಿತಿಯೊಂದು ವರದಿ ಸಲ್ಲಿಸಿತ್ತು. ಹೀಗಾಗಿ, ಪೊಲೀಸರ ಕರ್ತವ್ಯಲೋಪದ ಬಗ್ಗೆ ಮತ್ತೂಮ್ಮೆ ವಿಸ್ತೃತ ತನಿಖೆಗೆ ಆದೇಶಿಸಬೇಕು ಎಂದು ಕೇಂದ್ರ ಸರ್ಕಾರ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಎ.ಎಂ.ಖಾನ್ವಿಲ್ಕರ್‌ ನೇತೃತ್ವದ ನ್ಯಾಯಪೀಠ ಈ ತೀರ್ಮಾನ ಪ್ರಕಟಿಸಿದೆ.

ಜತೆಗೆ ನಿವೃತ್ತ ನ್ಯಾಯಮೂರ್ತಿ ಡಿ.ಕೆ.ಜೈನ್‌ ನೇತೃತ್ವದ ತ್ರಿಸದಸ್ಯ ಸಮಿತಿ ಸಲ್ಲಿಸಿದ ವರದಿಯನ್ನು ಮೊಹರು ಮಾಡಿದ ಲಕೋಟೆಯಲ್ಲಿಯೇ ಇರಿಸಬೇಕು. ಅದನ್ನು ಬಹಿರಂಗಗೊಳಿಸಬಾರದು ಎಂದೂ ನ್ಯಾಯಪೀಠ ಸೂಚಿಸಿದೆ.

ಇದನ್ನೂ ಓದಿ :ಧರ್ಮಶಾಲಾ : ಕರೇರಿಯ ಬೆಟ್ಟ ಪ್ರದೇಶದಲ್ಲಿ ಪಾಕ್‌ ಮೊಬೈಲ್‌ ಸಿಗ್ನಲ್‌ ಪತ್ತೆ!

ಪ್ರಕರಣದಲ್ಲಿ ತಮ್ಮ ವಾದ ಆಲಿಸಲಿಲ್ಲ ಎಂದು ವಿಶೇಷ ತನಿಖಾ ಸಮಿತಿಯ ಮುಖ್ಯಸ್ಥರಾಗಿದ್ದ ನಿವೃತ್ತ ಡಿಜಿಪಿ ಸಿಬಿ ಮ್ಯಾಥ್ಯೂಸ್‌ ಅರ್ಜಿಯನ್ನು ಪರಿಗಣಿಸಲು ನ್ಯಾಯಪೀಠ ನಿರಾಕರಿಸಿತು.

Advertisement

2018ರ ಸೆ.14ರಂದು ಕೇರಳ ಸರ್ಕಾರಕ್ಕೆ ನೀಡಿದ್ದ ಆದೇಶದಲ್ಲಿ ಆರೋಪಕ್ಕೆ ಗುರಿಯಾಗಿದ್ದ ನಿವೃತ್ತ ವಿಜ್ಞಾನಿ ನಂಬಿ ನಾರಾಯಣನ್‌ ಅವರಿಗೆ 50 ಲಕ್ಷ ರೂ. ಪರಿಹಾರ ನೀಡಬೇಕು. ಜತೆಗೆ ಸಮಿತಿಯೊಂದನ್ನು ರಚಿಸಿ ಪೊಲೀಸ್‌ ಇಲಾಖೆಯ ಕೆಲ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆಯೂ ಸೂಚಿಸಿತ್ತು.

Advertisement

Udayavani is now on Telegram. Click here to join our channel and stay updated with the latest news.

Next