Advertisement

ಐಟಿ ದಾಳಿ: ಹೈಕೋರ್ಟ್‌ಗೆ ಡಿ.ಕೆ.ಶಿವಕುಮಾರ್‌ ಅರ್ಜಿ

01:20 AM Jul 26, 2019 | Sriram |

ಬೆಂಗಳೂರು: ಆದಾಯ ತೆರಿಗೆ ಇಲಾಖೆ (ಐಟಿ) ದಾಳಿ ವೇಳೆ ನವದೆಹಲಿಯ ಮನೆಗಳಲ್ಲಿ ಸಿಕ್ಕ 8.60 ಕೋಟಿ ರೂ.ಬೇನಾಮಿ ಹಣ ಪತ್ತೆ ಪ್ರಕರಣದಲ್ಲಿ ಆರೋಪಗಳಿಂದ ತಮ್ಮನ್ನು ಕೈಬಿಡಬೇಕು ಎಂದು ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ರದ್ದುಗೊಳಿಸಿದ್ದನ್ನು ಪ್ರಶ್ನಿಸಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

Advertisement

ಈ ಅರ್ಜಿಯು ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ. ಡಿ.ಕೆ.ಶಿವಕುಮಾರ್‌ ಅವರ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೂ.25ರಂದು ವಜಾಗೊಳಿಸಿತ್ತು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಮ್ಮ ಅರ್ಜಿಯನ್ನು ವಜಾಗೊಳಿಸಿ ಹೊರಡಿಸಿದ ಆದೇಶ ಕಾನೂನು ಬಾಹಿರವಾಗಿದ್ದು, ಇದನ್ನು ಅನೂರ್ಜಿತಗೊಳಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.


Advertisement

Udayavani is now on Telegram. Click here to join our channel and stay updated with the latest news.

Next