Advertisement

ಮಂಗಳೂರು: ಕಾಂಗ್ರೆಸ್ ಮುಖಂಡನ ಮನೆ, ಕಚೇರಿ ಮೇಲೆ ಐಟಿ ದಾಳಿ

09:45 PM Apr 15, 2023 | Team Udayavani |

ಮಂಗಳೂರು: ಕಾಂಗ್ರೆಸ್ ಮುಖಂಡ, ಉದ್ಯಮಿ ವಿವೇಕ್ ರಾಜ್ ಪೂಜಾರಿ ಅವರ ನಗರದ ಎರಡು ಮನೆ ಮತ್ತು ಕಚೇರಿಗೆ ಶನಿವಾರ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

Advertisement

ಬೆಳಗ್ಗೆ ಸುಮಾರು 7 ಗಂಟೆಗೆ 14 ಮಂದಿ ಅಧಿಕಾರಿಗಳ ತಂಡ ವಿವೇಕ್ ರಾಜ್ ಅವರಿಗೆ ಸೇರಿದ ಅತ್ತಾವರ ಮತ್ತು ಮಣ್ಣಗುಡ್ಡೆಯಲ್ಲಿರುವ ಎರಡು ಮನೆಗಳಿಗೆ ಹಾಗೂ ವಿವೇಕನಗರದಲ್ಲಿರುವ ಕಚೇರಿಗೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ವಿವೇಕ್ ರಾಜ್ ಪೂಜಾರಿ ಅವರು, ನನ್ನ ವ್ಯವಹಾರದ ದಾಖಲೆಪತ್ರಗಳು ಸಮರ್ಪಕವಾಗಿದೆ. ನಾನು ತೆರಿಗೆ ವಂಚಿಸಿ ವ್ಯವಹರಿಸುವುದಿಲ್ಲ. ಇದು ಬಿಜೆಪಿಗರ ಕುಮ್ಮಕ್ಕಿನಿಂದ ಐಟಿ ದಾಳಿ‌ ನಡೆದಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಹಿಂದುತ್ವಕೋಸ್ಕರ ಹೋರಾಟದ ಕೇಸು ಕೆದಕಿ Independent ಸ್ಪರ್ಧೆಗೆ ಅಡ್ಡಿ

Advertisement

Udayavani is now on Telegram. Click here to join our channel and stay updated with the latest news.

Next