Advertisement
ಫೆಬ್ರವರಿ 4 ರಂದು “ಉದಯವಾಣಿ’ ಮಾಡಿರುವ ವರದಿಯನ್ನು ಪ್ರಸ್ತಾಪಿಸಿ ಮಾತನಾಡಿದ ಶೆಟ್ಟರ್, ರಾಜ್ಯ ಸರ್ಕಾರ ಸರೋಜಿನಿ ಮಹಿಷಿ ವರದಿಯನ್ನು ಪರಿಷ್ಕರಣೆ ಮಾಡಿ ಕನ್ನಡಿಗರಿಗೆ ಉದ್ಯೋಗ ಕೊಡಿಸುವುದಾಗಿ ಹೇಳುತ್ತದೆ. ಆದರೆ, 2014ರಲ್ಲಿ ಇದೇ ಸರ್ಕಾರ ಐಟಿ, ಬಿಟಿ ಕಂಪನಿಗಳಿಗೆ ಕಾರ್ಮಿಕ ಕಾಯಿದೆಯಿಂದ ವಿನಾಯಿತಿ ನೀಡಿ ಆದೇಶ ನೀಡಿದೆ. ಇದರಿಂದ ಕನ್ನಡಿಗರಿಗೆ ಉದ್ಯೋಗ ವಂಚನೆಯಾಗುತ್ತಿದೆ. ಐಟಿ, ಬಿಟಿ ಕಂಪನಿಗಳು ಏಕಕಾಲಕ್ಕೆ ಎಲ್ಲ ಉದ್ಯೋಗದಲ್ಲಿ ಮೀಸಲಾತಿ ನೀಡಬೇಕೆಂದೇನಿಲ್ಲ. ಹಂತ ಹಂತವಾಗಿಯಾದರೂ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡಬೇಕು. ಅದಕ್ಕೆ ರಾಜ್ಯ ನೀಡಿರುವ ವಿನಾಯಿತಿಯನ್ನು ವಾಪಸ್ ಪಡೆದು ಕನ್ನಡಿಗರಿಗೆ ಉದ್ಯೋಗ ದೊರೆಯುವಂತೆ ಮಾಡಬೇಕು ಎಂದು ಆಗ್ರಹಿಸಿದರು.
Advertisement
ಐಟಿ,ಬಿಟಿಗೆ ನೀಡಿದ ವಿನಾಯ್ತಿ ವಾಪಸ್ ಪಡೆಯಲು ಆಗ್ರಹ
03:45 AM Feb 10, 2017 | Team Udayavani |
Advertisement
Udayavani is now on Telegram. Click here to join our channel and stay updated with the latest news.