Advertisement

ಐಟಿ ಉದ್ಯೋಗಿ ಆತ್ಮಹತ್ಯೆ

12:14 PM Oct 31, 2018 | Team Udayavani |

ಬೆಂಗಳೂರು: ಸಾಲ ತೀರಿಸಲಾಗದೇ ಟೆಕ್ಕಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಎಲೆಕ್ಟ್ರಾನಿಕ್‌ ಸಿಟಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ರಾತ್ರಿ ನಡೆದಿದೆ. ತಮಿಳುನಾಡು ಮೂಲದ ಸೇತು ಕುಮಾರ್‌ (30) ಆತ್ಮಹತ್ಯೆ ಮಾಡಿಕೊಂಡ ಟೆಕ್ಕಿ.

Advertisement

ಸೇತುಕುಮಾರ್‌ ಕಳೆದ ಒಂದು ವರ್ಷಗಳಿಂದ ಎಲೆಕ್ಟ್ರಾನಿಕ್‌ ಸಿಟಿಯ ನೀಲಾದ್ರಿ ನಗರದ 2ನೇ ಕ್ರಾಸ್‌ನಲ್ಲಿರುವ ಪಿ.ಜಿ ಒಂದರಲ್ಲಿ ಇಬ್ಬರು ಸ್ನೇಹಿತರ ಜತೆ ವಾಸವಾಗಿದ್ದರು. ನಗರದ ಪ್ರತಿಷ್ಠಿತ ಕಂಪನಿಯೊಂದರಲ್ಲಿ ಸಾಫ್ಟ್ವೇರ್‌ ಇಂಜಿನಿಯರ್‌ ಆಗಿದ್ದ ಸೇತುಕುಮಾರ್‌, “ಇಂದು (ಸೋಮವಾರ) ನನಗೆ ರಜೆಯಿದೆ. ನಾನು ಕಚೇರಿಗೆ ಬರುವುದಿಲ್ಲ’ ಎಂದು ಹೇಳಿದ್ದಾರೆ.

ಬಳಿಕ ಇಬ್ಬರು ಸ್ನೇಹಿತರು ಕೆಲಸಕ್ಕೆ ಹೋಗಿದ್ದರು. ನಂತರ ರಾತ್ರಿ 8 ಗಂಟೆ ಸುಮಾರಿಗೆ ಕೆಲಸ ಮುಗಿಸಿಕೊಂಡು ಪಿ.ಜಿಗೆ ಬಂದ ಇಬ್ಬರು ಸ್ನೇಹಿತರು, ಹಲವು ಬಾರಿ ಬಾಗಿಲು ಬಡಿದರೂ, ಸೇತುಕುಮಾರ್‌ ಬಾಗಿಲು ತೆರೆದಿಲ್ಲ. ಆತನ ಮೊಬೈಲ್‌ಗೆ ಕರೆ ಮಾಡಿದರೂ ಕರೆ ಸ್ವೀಕರಿಸಿಲ್ಲ. ಇದರಿಂದ ಅನುಮಾಗೊಂಡ ಸ್ನೇಹಿತರು, ಕಿಟಕಿ ಮೂಲಕ ನೋಡಿದಾಗ ಸೇತುಕುಮಾರ್‌ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಸೇತುಕುಮಾರ್‌ ಲಕ್ಷಾಂತರ ರೂ. ಸಾಲ ಮಾಡಿಕೊಂಡಿದ್ದರು. ಈ ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಪ್ರಾಥಮಿಕ ಮಾಹಿತಿಯಿಂದ ತಿಳಿದು ಬಂದಿರುವುದಾಗಿ ಎಲೆಕ್ಟ್ರಾನಿಕ್‌ ಸಿಟಿ ಠಾಣೆ ಪೊಲೀಸರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next