Advertisement

ಐಟಿ ತನಿಖೆ: ಕುಟುಂಬ ಸದಸ್ಯರ ಖಾತೆಗಳ ಮೇಲೆ ನಿಗಾ 

07:35 AM Aug 10, 2017 | Team Udayavani |

ಬೆಂಗಳೂರು: ಇಂಧನ ಸಚಿವ ಡಿ.ಕೆ.ಶಿವಕುಮಾರ್‌ ಕುಟುಂಬ ಸದಸ್ಯರ ಮೇಲಿನ ದಾಳಿಗೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ತನಿಖೆ ಚುರುಕುಗೊಂಡಿದ್ದು, ಶಿವಕುಮಾರ್‌, ಕುಟುಂಬ ಸದಸ್ಯರ ಬ್ಯಾಂಕ್‌ ಖಾತೆಗಳ ವಹಿವಾಟು ಮೇಲೆ ನಿಗಾ ಇರಿಸಿ ನಿಯಂತ್ರಣ ಹೊಂದಿದೆ ಎಂದು ಮೂಲಗಳು ತಿಳಿಸಿವೆ.

Advertisement

ಡಿ.ಕೆ. ಶಿವಕುಮಾರ್‌ ಮಾತ್ರವಲ್ಲದೇ, ಪತ್ನಿ ಹಾಗೂ ಕುಟುಂಬ ಸದಸ್ಯರ ಬ್ಯಾಂಕ್‌ ಖಾತೆಗಳ ವಹಿವಾಟುಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವ ಐಟಿ ಅಧಿಕಾರಿಗಳು, ವಿಚಾರಣೆ ಪ್ರಕ್ರಿಯೆ ಮುಗಿಯುವವರೆಗೂ ಯಾವುದೇ ವಹಿವಾಟು ನಡೆಸದಂತೆ ನಿರ್ದೆಶನ ನೀಡಿದ್ದಾರೆ ಎಂದು ಹೇಳಲಾಗಿದೆ.

ಅಲ್ಲದೇ ಸಹೋದರ ಸಂಸದ ಡಿ.ಕೆ.ಸುರೇಶ್‌, ವಿಧಾನಪರಿಷತ್‌ ಸದಸ್ಯ ಎಸ್‌.ರವಿ, ಮಾವ ತಿಮ್ಮಯ್ಯ, ಜ್ಯೋತಿಷಿ ದ್ವಾರಕನಾಥ ಅವರ ಖಾತೆಗಳ ಪರಿಶೀಲನೆಯನ್ನು ನಡೆಸಲಾಗಿದ್ದು, ಅವರ ಖಾತೆಗಳ ಮೇಲೂ ನಿಯಂತ್ರಣ ಹೇರಲಾಗಿದೆ. ಇದೊಂದು ಸಾಮಾನ್ಯ ಪ್ರಕ್ರಿಯೆ. ಇದರಲ್ಲಿ ಯಾವುದೇ ವಿಶೇಷವಿಲ್ಲ. ಯಾವುದೇ ವ್ಯಕ್ತಿ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲೂ ಇದೇ ರೀತಿಯ ಪ್ರಕ್ರಿಯೆ
ನಡೆಯುತ್ತದೆ ಎಂದು ಐಟಿ ಮೂಲಗಳು ತಿಳಿಸಿವೆ.

ಬ್ಯಾಂಕ್‌ಗಳಿಗೂ ನೋಟಿಸ್‌: ಡಿ.ಕೆ. ಶಿವಕುಮಾರ್‌ ಅವರು ಹೂಡಿಕೆ ಮಾಡಿರುವ ಕೆಲ ಖಾಸಗಿ ಸಂಸ್ಥೆಗಳ ಮೇಲೆ ದಾಳಿ ನಡೆಸಿದ ಬಳಿಕ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದೇ ವೇಳೆ ಬ್ಯಾಂಕ್‌ ಖಾತೆಗಳ ವಿವರಣೆ ಪಡೆದುಕೊಳ್ಳಲಾಗಿದೆ. ದಾಳಿ ನಡೆದ ಸಂದರ್ಭದಲ್ಲಿ ಕುಟುಂಬ ಸದಸ್ಯರು ಖಾತೆ ಹೊಂದಿರುವ ಬ್ಯಾಂಕ್‌ಗಳಿಗೆ ಐಟಿ ಅಧಿಕಾರಿಗಳು ನೋಟಿಸ್‌ ಜಾರಿಗೊಳಿಸಿದ್ದರು. ವಹಿವಾಟಿನ ಕುರಿತು ಮಾಹಿತಿ ಕೇಳಲಾಗಿದೆ. ದಾಳಿ ವೇಳೆ 300ಕ್ಕೂ ಹೆಚ್ಚು ಖಾತೆಗಳನ್ನು ಹೊಂದಿರುವ ಮಾಹಿತಿ ಇತ್ತು. ಬ್ಯಾಂಕ್‌ಗಳು
ಸಹ ದಾಳಿಗೊಳಗಾದವರ ಖಾತೆಗಳ ವಿವರದ ಕುರಿತು ಕೆಲವು ಮಾಹಿತಿ ನೀಡಿವೆ ಎಂದು ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next