Advertisement

ಹಲ್ಲೆ ನನ್ನ ಮೇಲಲ್ಲ, ದೆಹಲಿ ಜನರ ಮೇಲಾಗಿದ್ದು: ಕೇಜ್ರಿವಾಲ್‌

09:21 AM May 06, 2019 | Team Udayavani |

ಹೊಸದಿಲ್ಲಿ : ರ‍್ಯಾಲಿಯಲ್ಲಿ ಭಾಗವಹಿಸಿದ್ದಾಗ ವ್ಯಕ್ತಿಯೊಬ್ಬ ಕಪಾಳಮೋಕ್ಷ ಮಾಡಿದ ಬಗ್ಗೆ ಅರವಿಂದ್‌ ಕೇಜ್ರಿವಾಲ್‌ ಅವರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದು, ಪ್ರಧಾನಿ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

Advertisement

ಹಲ್ಲೆ ನನ್ನ ಮೇಲಾಗಿಲ್ಲ, ದೆಹಲಿ ಜನರ ತೀರ್ಪಿನ ಮೇಲಾಗಿದೆ ಎಂದು ಕೇಜ್ರಿವಾಲ್‌ ಭಾನುವಾರ ಹೇಳಿಕೆ ನೀಡಿದ್ದಾರೆ.

ಮೋತಿನಗರದಲ್ಲಿ ರೋಡ್‌ಶೋದಲ್ಲಿ ಭಾಗವಹಿಸಿದ್ದ ಕೇಜ್ರಿವಾಲ್‌, ಜನರಿಗೆ ಕೈಬೀಸುತ್ತಾ ಸಾಗಿದ್ದರು. ಈ ವೇಳೆ ವ್ಯಕ್ತಿ ಯೊಬ್ಬ ವಾಹನವನ್ನೇರಿ ಕೇಜ್ರಿವಾಲ್‌ಗೆ ಹೊಡೆದಿದ್ದ. ಥಳಿಸಿದ ವ್ಯಕ್ತಿಯನ್ನು ತಕ್ಷಣ ಬಂಧಿಸಲಾಗಿದೆ. ತನಿಖೆ ನಡೆ ಸಲಾಗುತ್ತಿದೆ ಎಂದು ಪೊಲೀಸರು ತಿಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next