Advertisement

ಬೆಂಗಳೂರಿನ ರಸ್ತೆ ಗುಂಡಿ: ಟಾಸ್ಕ್ ಪೋರ್ಸ್ ರಚನೆ ;ಗುತ್ತಿಗೆದಾರನ ಮೇಲೆ ಕ್ರಮ

05:09 PM Oct 06, 2021 | Team Udayavani |

ಬೆಂಗಳೂರು /ಮೈಸೂರು : ಬೆಂಗಳೂರಿನ ರಸ್ತೆಗಳ ಕಳಪೆ ಬಗ್ಗೆ ವರದಿ ತಯಾರಿಕೆಗೆ ಟಾಸ್ಕ್ ಪೋರ್ಸ್ ರಚನೆ ಮಾಡಿದ್ದೇನೆ.ಯಾವ ಅವಧಿಯಲ್ಲಿ ರಸ್ತೆ ಆಗಿದೆ. ರಸ್ತೆ ಗುಣಮಟ್ಟದಿಂದ ಮಾಡಲಾಗಿದೆಯೋ ಇಲ್ಲವೋ ಎಂಬುದರ ಬಗ್ಗೆ ವರದಿ ತರಿಸಿಕೊಳ್ಳುತ್ತೇನೆ‌ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಹೇಳಿಕೆ ನೀಡಿದ್ದಾರೆ.

Advertisement

ಕಳಪೆ ಕಾಮಗಾರಿಯಿಂದ ರಸ್ತೆಯಲ್ಲಿ ಗುಂಡಿ ಬಿದ್ದಿದ್ದರೆ ಗುತ್ತಿಗೆದಾರನ ಮೇಲೆ ಕ್ರಮ ನಿಶ್ಚಿತ. ಮಳೆ ಬಂದಾಗ ಮಾತ್ರ ಈ ವಿಚಾರ ಚರ್ಚೆ ಮಾಡಿ ನಂತರ ಸುಮ್ಮನಾಗುವುದಿಲ್ಲ. ಈ ವಿಚಾರದಲ್ಲಿ ಸರಕಾರ ಗಂಭೀರವಾಗಿ ಪರಿಗಣಿಸಿದೆ.ಮಳೆ ಬಂದಾಗ ನಿರಂತರ ನೀರು ತುಂಬುವ ಪ್ರದೇಶ ಗುರುತು ಮಾಡಿ, ಅವಕ್ಕೆ ಶಾಸ್ವತ ಪರಿಹಾರ ಕಂಡು ಹಿಡಿಯಲಾಗುತ್ತದೆ.
ಮೈಸೂರಿನಲ್ಲಿ ಸಿಎಂ ಹೇಳಿಕೆ ನೀಡಿದ್ದಾರೆ.

ಗುಂಡಿಗಳನ್ನು ಮುಚ್ಚುವುದಕ್ಕೆ ಕಷ್ಟವಾಗುತ್ತಿದೆ

ಸೈಕ್ಲೋನ್ ಕಾರಣದಿಂದ ಬೆಂಗಳೂರಿನಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವುದಕ್ಕೆ ಕಷ್ಟವಾಗುತ್ತಿದೆ ಎಂದು ಸಚಿವ ಆರ್.ಅಶೋಕ್ ಅವರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಳೆಯಿಂದ ಸಮಸ್ಯೆ ಆಗಿರುವ ವಿಚಾರಕ್ಕೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಚಿವ ಅಶೋಕ್, ನಾನು ಕಮಿಷನರ್ ಜೊತೆಗೆ ಮಾತಾಡಿದ್ದೇನೆ, ಈ ಬಾರಿ ಸಾಕಷ್ಟು ಮಳೆ ಆಗುತ್ತಿದೆ, ಈಗಾಗಲೇ ಗುಂಡಿಗಳನ್ನು ಮುಚ್ಚುವುದಕ್ಕೆ ಹೇಳಿದ್ದೇನೆ.
ಬೇರೆ ಬೇರೆ ಸೈಕ್ಲೋನ್ ಆಗುತ್ತಿದ್ದು, ಮಳೆ ಬರುತ್ತಿದೆ, ಹೀಗಾಗಿ ಗುಂಡಿ‌ ಮುಚ್ಚೋಕು ಕಷ್ಟ ಆಗುತ್ತಿದೆ. ನೀರು ನಿಂತು ಒಣಗುವ ವರೆಗೂ ಏನೂ ಮಾಡುವುದಕ್ಕೆ ಆಗುವುದಿಲ್ಲ ಎಂದರು.

Advertisement

ಕೂಡಲೇ ಕ್ರಮ ತೆಗೆದುಕೊಳ್ಳಲು ಹೇಳಿದ್ದೇನೆ ನೀರು ನುಗ್ಗಿರುವ ಕಡೆ ಎಚ್ಚೆತ್ತುಕೊಂಡು ಸರಿ ಮಾಡಲು ಸೂಚಿಸಿದ್ದೇನೆ.
ಪ್ರತಿ ವಿಧಾನಸಭೆ ಕ್ಷೇತ್ರದಲ್ಲಿ ತಂಡ ಮಾಡಿ ಮರ ಬಿದ್ದಾಗ ತುಂಡರಿಸಲು ಹೇಳಿದ್ದೇನೆ. ನಾನು ಕೂಡ ಸ್ಥಳಕ್ಕೆ ಹೋಗುತ್ತೇನೆ. ದಸರಾ ಕಾರ್ಯಕ್ರಮ ಮುಗಿಸಿಕೊಂಡು ಬಂದು ಇದನೆಲ್ಲ ನೋಡುತ್ತೇನೆ ಎಂದರು.

ಬೆಂಗಳೂರು ಉಸ್ತುವಾರಿ ವಿಚಾರ ಸಿಎಂ ಬಸವರಾಜ ಬೊಮ್ಮಾಯಿ‌ ಅವರ ಗಮನದಲ್ಲಿ ಇದೆ ಅವರೆ ತೀರ್ಮಾನ ಮಾಡುತ್ತಾರೆ. ಸದ್ಯ ಮಳೆ ಅನಾಹುತದ ಬಗ್ಗೆ ಮೊದಲು ತೀರ್ಮಾನ ಮಾಡುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next