Advertisement

Election Ticket ಬಿಜೆಪಿಯಲ್ಲಿ ಹಣ ಪಡೆದು ಟಿಕೆಟ್‌ ನೀಡಿಕೆ ಸ್ಪಷ್ಟ: ಸಚಿವ ಬಿ.ನಾಗೇಂದ್ರ

08:27 PM Oct 22, 2023 | Team Udayavani |

ಚಿತ್ರದುರ್ಗ: ಬಿಜೆಪಿಯಲ್ಲಿ ಹಣ ಪಡೆದು ಟಿಕೆಟ್‌ ನೀಡುವ ಸಂಸ್ಕೃತಿ ಇರುವುದು ಸ್ಪಷ್ಟವಾಗಿದೆ ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವ ಬಿ.ನಾಗೇಂದ್ರ ಹೇಳಿದರು.

Advertisement

ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ಹಿಂದೆ ಕೆಲ ಸ್ವಾಮೀಜಿ, ಓರ್ವ ಮಹಿಳೆ ಸಿಕ್ಕಿ ಬಿದ್ದಿದ್ದರು. ಹಗರಿಬೊಮ್ಮನಹಳ್ಳಿಯಲ್ಲೂ ಟಿಕೆಟ್‌ಗಾಗಿ ಹಣ ಪಡೆದ ಆರೋಪವಿದೆ. ಬಿಜೆಪಿಯವರಿಗೆ ದುಡ್ಡು ಬಿಟ್ಟರೆ ಬೇರೆನೂ ಗೊತ್ತಿಲ್ಲ. ಸಾಮಾಜಿಕ ನ್ಯಾಯದ ಬಗ್ಗೆ ಅವರಿಗೆ ಅರಿವಿಲ್ಲ. ನಮ್ಮದು ಅಲ್ಪಾವಧಿ ಸರ್ಕಾರ ಎನ್ನುತ್ತಿರುವ ಮಾಜಿ ಸಚಿವರಾದ ಗೋವಿಂದ ಕಾರಜೋಳ ಹಾಗೂ ಈಶ್ವರಪ್ಪ ಭ್ರಮೆಯಲ್ಲಿದ್ದಾರೆ.

ಪಂಚ ಗ್ಯಾರಂಟಿ ಯೋಜನೆಗಳನ್ನು ನೋಡಿ ಹೊಟ್ಟೆ ಉರಿಯಿಂದ ಹೀಗೆ ಹೇಳುತ್ತಿದ್ದಾರೆ. ಸರ್ಕಾರದಲ್ಲಿ ಅನುದಾನದ ಕೊರತೆಯಿಲ್ಲ. ಹಂತ ಹಂತವಾಗಿ ಎಲ್ಲ ಯೋಜನೆಗಳಿಗೂ ಅನುದಾನ ಒದಗಿಸಲಾಗುತ್ತದೆ. ಎಲ್ಲಾ ಶಾಸಕರಿಗೂ ಸ್ಪಂದಿಸುವಂತೆ ಸಿಎಂ, ಡಿಸಿಎಂ ಸೂಚಿಸಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next