Advertisement

ಆರ್‌ಬಿಐ ಗವರ್ನರ್‌ ನೇಮಕ ವಿವರ ಬಹಿರಂಗ ಅಸಾಧ್ಯ

06:25 AM Mar 27, 2019 | mahesh |

ಹೊಸದಿಲ್ಲಿ: ಭಾರತೀಯ ರಿಸರ್ವ್‌ ಬ್ಯಾಂಕ್‌ನ ಗವರ್ನರ್‌ ಆಗಿ ಶಕ್ತಿಕಾಂತ್‌ ದಾಸ್‌ ಅವರನ್ನು ನೇಮಕ ಮಾಡಿಕೊಂಡ ವಿವರ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸರಕಾರ ತಿಳಿಸಿದೆ. ಮಾಹಿತಿ ಹಕ್ಕು ಕಾಯ್ದೆಯ ಅನ್ವಯ ಸಲ್ಲಿಸಲಾಗಿದ್ದ ಅರ್ಜಿಯ ಕುರಿತು ಪ್ರತಿಕ್ರಿಯೆ ನೀಡಿದ ವೇಳೆ ಈ ಉತ್ತರ ನೀಡಲಾಗಿದೆ. ಶಕ್ತಿಕಾಂತ್‌ ದಾಸ್‌ ಹೊರತಾಗಿ ಇತರ ಪ್ರಮುಖರ ಹೆಸರು ಪ್ರಸ್ತಾವನೆಯಲ್ಲಿ ಸಲ್ಲಿಕೆಯಾಗಿತ್ತು. ಅದಕ್ಕೆ ಸಂಬಂಧಿಸಿದಂತೆ ಸಂಪುಟ ಸಚಿವರು, ಕಾರ್ಯದರ್ಶಿಗಳು ನಡೆಸಿದ ಸಭೆಯ ನಡಾವಳಿಗಳು, ಟಿಪ್ಪಣಿಗಳ ಬಗ್ಗೆ ಮಾಹಿತಿ ನೀಡಬೇಕೆಂದು ಅರ್ಜಿಯಲ್ಲಿ ಕೋರಿಕೆ ಸಲ್ಲಿಸಲಾಗಿತ್ತು. 2018ರ ಡಿ.11ರಂದು ದಾಸ್‌ರನ್ನು ಗವರ್ನರ್‌ ಹುದ್ದೆಗೆ ನೇಮಕ ಮಾಡಲಾಗಿತ್ತು.

Advertisement
Advertisement

Udayavani is now on Telegram. Click here to join our channel and stay updated with the latest news.

Next