Advertisement

ಹೊರಟ್ಟಿ ಹಿರಿತನ ಪರಿಗಣಿಸದೇ ಇರುವುದು ಹಿನ್ನಡೆ: ಶೆಟ್ಟರ್‌

06:05 AM Jun 11, 2018 | Team Udayavani |

ಹುಬ್ಬಳ್ಳಿ: ಉತ್ತರ ಕರ್ನಾಟಕದ ಹಿರಿಯ ನಾಯಕರಾಗಿರುವ ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿಯವರಿಗೆ ಸಚಿವ ಸ್ಥಾನ ದೊರೆಯುವ ನಿರೀಕ್ಷೆಯಿತ್ತು. ಆದರೆ ಅವರನ್ನು ಪರಿಗಣಿಸದೇ ಇರುವುದರಿಂದ ಈ ಭಾಗದ ಸಮಸ್ಯೆಗಳಿಗೆ
ಸ್ಪಂದಿಸುವವರು ಇಲ್ಲದಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಅಭಿಪ್ರಾಯಪಟ್ಟರು.

Advertisement

ನಗರದಲ್ಲಿ ಭಾನುವಾರ ಆಯೋಜಿಸಿದ್ದ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾತನಾಡಿದ ಅವರು, ಹೊರಟ್ಟಿಯವರಿಗೆ ಸಚಿವ ಸ್ಥಾನ ಸಿಗುತ್ತದೆ. ಈ ಭಾಗದ ಸಮಸ್ಯೆಗಳಿಗೆ ಧ್ವನಿಯಾಗುತ್ತಾರೆಂಬ ನಿರೀಕ್ಷೆಯಿತ್ತು. ಆದರೆ
ಅವರ ಹಿರಿತನ ಪರಿಗಣಿಸದಿರುವುದು ಈ ಭಾಗಕ್ಕೆ ಹಿನ್ನಡೆಯಾದಂತಾಗಿದೆ ಎಂದರು

Advertisement

Udayavani is now on Telegram. Click here to join our channel and stay updated with the latest news.

Next