Advertisement

ಸಂಸದರನ್ನು ಟೀಕಿಸುವುದು ಸರಿಯಲ್ಲ: ಸುಮಲತಾ

10:55 PM Oct 04, 2019 | Lakshmi GovindaRaju |

ಮೈಸೂರು: ಕರ್ನಾಟಕದಲ್ಲಿ ಪ್ರವಾಹದಿಂದ ಉಂಟಾಗಿರುವ ಹಾನಿಗೆ ಕೇಂದ್ರ ಸರ್ಕಾರ ಪರಿಹಾರ ಹಣ ಕೊಟ್ಟೇ ಕೊಡುತ್ತದೆ. ತಾಂತ್ರಿಕ ಕಾರಣಗಳಿಂದಾಗಿ ರಾಜ್ಯದ ವರದಿಯನ್ನು ಕೇಂದ್ರ ತಿರಸ್ಕರಿಸಬಹುದು. ಹಾಗೆಂದು ಪರಿಹಾರವನ್ನೇ ಕೊಡದೇ ಇರಲು ಸಾಧ್ಯವಿಲ್ಲ ಎಂದು ಮಂಡ್ಯ ಸಂಸದೆ ಸುಮಲತಾ ಹೇಳಿದ್ದಾರೆ.

Advertisement

ಸುದ್ದಿಗಾರರ ಜತೆ ಮಾತನಾಡಿ, ಪರಿಹಾರ ನೀಡಿಕೆ ವಿಳಂಬವಾಗಿರುವುದಕ್ಕೆ ಲೋಕಸಭಾ ಸದಸ್ಯರ‌ನ್ನು ಟೀಕೆ ಮಾಡುವುದು ಸರಿಯಲ್ಲ. ಸಾರ್ವಜನಿಕವಾಗಿ ಮಾತನಾ ಡು ತ್ತಿಲ್ಲ ಎಂಬ ಕಾರಣಕ್ಕೆ ಕರ್ನಾಟಕದ ಸಂಸದರು ಕೇಂದ್ರ ಸರ್ಕಾರವನ್ನು ಪ್ರಶ್ನೆ ಮಾಡುತ್ತಿಲ್ಲ ಎಂಬ ಭಾವನೆ ಬೇಡ. ನಾವು ಯಾರ ಬಳಿ ಮಾತನಾಡಬೇಕೋ ಅವರ ಬಳಿ ಮಾತನಾಡುತ್ತಿದ್ದೇವೆ. ಅವರು ಏನೋ ತಾಂತ್ರಿಕ ಕಾರಣ ಉಂಟಾಗಿದೆ ಎಂದು ಹೇಳುತ್ತಿದ್ದಾರೆ.

ಜೋಡೆತ್ತುಗಳು ಎಲ್ಲಿ ಎಂದು ಕೆಲವರು ಪ್ರಶ್ನೆ ಮಾಡುತ್ತಾರೆ. ಚುನಾವಣಾ ಪ್ರಚಾ ರದ ವೇಳೆ ನಮಗೆ ಬೆಂಬಲ ನೀಡಲು ಬರುತ್ತಾರೆ. ಹಾಗೆಂದು ದರ್ಶನ್‌ ಮತ್ತು ಯಶ್‌ ಮಂಡ್ಯಕ್ಕೆ ಬರಬೇಕು ಎನ್ನುವುದು ತುಂಬಾ ಚಿಕ್ಕ ವಿಷಯ. ಎಂಪಿಯಾಗಿ ಆಯ್ಕೆಯಾಗಿರುವುದು ನಾನು. ದರ್ಶನ್‌ ಅಥವಾ ಯಶ್‌ ಅಲ್ಲ. ಸರ್ಕಾರದಲ್ಲಿ ಯಾವುದೇ ಅಧಿಕಾರ ಇಲ್ಲದ ಅವರು ಬಂದು ಏನು ಮಾಡುತ್ತಾರೆ. ಎಂಪಿಯಾಗಿ ಕ್ಷೇತ್ರದ ಜನರ ಕೆಲಸವನ್ನು ನಾನು ಮಾಡಬೇಕು.
-ಸುಮಲತಾ, ಸಂಸದೆ

Advertisement

Udayavani is now on Telegram. Click here to join our channel and stay updated with the latest news.

Next