Advertisement

ಉತ್ತರಿಸಲು ಇದು ಸಕಾಲವಲ್ಲ: ಕುಮಾರಸ್ವಾಮಿ

10:59 PM Aug 23, 2019 | Team Udayavani |

ಬೆಂಗಳೂರು: ದೇವೇಗೌಡರ ಕುಟುಂಬದ ಬಗ್ಗೆ ಸಿದ್ದರಾಮಯ್ಯ ಅವರು ಮಾಡಿರುವ ಆರೋಪಗಳ ಬಗ್ಗೆ ಮಾಜಿ ಮುಖ್ಯ ಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಣ್ಣನೆಯ ಟ್ವೀಟ್‌ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಡಿರುವ ಆರೋಪಗಳಿಗೆ ಉತ್ತರಿಸಲು ಇದು ಸಕಾಲವಲ್ಲ.

Advertisement

ದೇಶದ ರಾಜಕೀಯ ವಿದ್ಯಮಾನಗಳು ಏಕರೂಪವಾಗಿವೆ. ಜಾತ್ಯತೀತ ಶಕ್ತಿಗಳು ಒಗ್ಗೂಡಬೇಕಾದ ಇಂತಹ ಸಂದರ್ಭದಲ್ಲಿ ಒಡಕಿನ ಮಾತುಗಳು ಆರೋಗ್ಯಕರವಲ್ಲ. ಕಾಲ ಕೂಡಿ ಬಂದಾಗ ಖಂಡಿತ ಎಲ್ಲದಕ್ಕೂ ಉತ್ತರಿಸುವೆ’ ಎಂದು ಟ್ವೀಟ್‌ ಮೂಲಕ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next