Advertisement
ಚಿಂಚೋಳಿಯಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ಬೆಂಬಲಿಗರೊಂದಿಗೆ ಶನಿವಾರ ಸುದೀರ್ಘ ಸಮಾಲೋಚನೆ ನಡೆಸಿ, ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. “ಚಿಂಚೋಳಿ ಕ್ಷೇತ್ರದ ಟಿಕೆಟ್ ಸಿಗದಿದ್ದಕ್ಕೆ ನೋವಾಗಿದೆ.
Related Articles
Advertisement
ಅವರು ತಮ್ಮ ಕಾಂಗ್ರೆಸ್ ಪಕ್ಷದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮುನ್ನ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಜತೆ ಮಾತುಕತೆ ನಡೆಸಿ ತಮಗೆ ಲೋಕಸಭೆ ಮತ್ತು ಚಿಂಚೋಳಿ ವಿಧಾನಸಭೆ ಟಿಕೆಟ್ ಕೊಡಬೇಕೆಂದು ಕೇಳಿಕೊಂಡಿದ್ದರು. ಇದಕ್ಕೆ ಅಮಿತ್ ಶಾ ಒಪ್ಪಿದ್ದರಂತೆ. ಈ ವಿಷಯವನ್ನು ನನಗೆ ಬಿಜೆಪಿ ರಾಜಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ತಿಳಿಸಿದ್ದಾರೆ’ ಎಂದು ಹೇಳಿದರು.
“ಇನ್ನು ಕೆಲವು ಶಾಸಕರು ಬಿಜೆಪಿಗೆ ಬರುತ್ತಿದ್ದಾರೆ. ಒಂದು ವೇಳೆ ಜಾಧವಗೆ ಕೊಟ್ಟ ಮಾತಿನಂತೆ ನಡೆಯದಿದ್ದರೆ, ಬರಬೇಕಾದವರು ಬಿಜೆಪಿಗೆ ಬರಲು ಹಿಂದೇಟು ಹಾಕುತ್ತಾರೆ. ಅಲ್ಲದೆ ಅವರಿಗೆ ತಪ್ಪು ಸಂದೇಶ ರವಾನೆಯಾಗುತ್ತದೆ. ಕೆಜೆಪಿ ಕಟ್ಟಿದಾಗ ಸಚಿವ ಸ್ಥಾನ ತ್ಯಾಗ ಮಾಡಿ ನನ್ನೊಂದಿಗೆ ಬಂದಿದ್ದೆ. ಈಗ ಪಕ್ಷಕ್ಕಾಗಿ ತ್ಯಾಗ ಮಾಡುವಂತೆ ಯಡಿಯೂರಪ್ಪ ಕೋರಿದ್ದಾರೆ. ಆದ್ದರಿಂದ ನಾನು ಬಿಜೆಪಿ ಜತೆಗೇ ಇರುತ್ತೇನೆ’ ಎಂದರು.
ಸೂಕ್ತ ಸ್ಥಾನಮಾನ ನೀಡುವ ಭರವಸೆ: ರಾಜ್ಯದ ಜನತೆಯ ಹಿತದೃಷ್ಟಿಯಿಂದ ಸಮ್ಮಿಶ್ರ ಸರ್ಕಾರವನ್ನು ಕಿತ್ತೂಗೆಯಬೇಕೆಂದು ಯಡಿಯೂರಪ್ಪ ಹೇಳಿದ್ದಾರೆ. ಚಿಂಚೋಳಿ ಟಿಕೆಟ್ ನನಗೆ ಸಿಗದಿದ್ದಕ್ಕೆ ತಮಗೂ ನೋವಾಗಿದೆ ಎಂದಿದ್ದಾರೆ. ಕೆಲವೇ ದಿನಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಲಿದೆ. ಈ ಸಂದರ್ಭದಲ್ಲಿ ಸೂಕ್ತ ಸ್ಥಾನಮಾನ ನೀಡುತ್ತೇನೆ ಎಂದು ಅವರು ಭರವಸೆ ನೀಡಿದ್ದಾರೆ ಎಂದು ಸುನೀಲ ವಲ್ಯಾಪುರೆ ತಿಳಿಸಿದರು.