Advertisement

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

10:42 PM Apr 18, 2024 | Team Udayavani |

ಮದ್ದೂರು: ಸಂಸದೆ ಸುಮಲತಾ ಅಂಬರೀಶ್‌ ಅವರು ಬಿಜೆಪಿ ಸೇರ್ಪಡೆಗೊಂಡಿದ್ದು, ಅವರು ಪ್ರಚಾರಕ್ಕೆ ಬರುವುದರ ಬಗ್ಗೆ ರಾಜ್ಯ ನಾಯಕರು ತೀರ್ಮಾನ ಮಾಡಲಿದ್ದಾರೆ ಎಂದು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿ ನಿಖಿಲ್‌ ಕುಮಾರಸ್ವಾಮಿ ಹೇಳಿದರು.

Advertisement

ತಾಲೂಕಿನ ಕೆಸ್ತೂರು ಗ್ರಾಮದಲ್ಲಿ ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿ ಪರ ಬಿರುಸಿನ ಪ್ರಚಾರ ಕೈಗೊಂಡು ಸುದ್ದಿಗಾರರೊಂದಿಗೆ ಮಾತನಾಡಿದರು.

ನಟ ದರ್ಶನ್‌ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್‌ ಚಂದ್ರು  ಪರವಾಗಿ ಪ್ರಚಾರ ಕೈಗೊಂಡಿರುವ ಕುರಿತು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಯಾರಿಗೆ ಬೇಕಾದರೂ ಚುನಾವಣ ಪ್ರಚಾರ ಮಾಡಬಹುದು. ಈ ಬಗ್ಗೆ ನಾನು ಹೆಚ್ಚೇನೂ ಮಾತನಾಡುವುದಿಲ್ಲ ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next