Advertisement

ಬಿಜೆಪಿಗೆ ಡ್ಯಾಮೇಜ್ ಆಗುತ್ತಿರುವುದು ನಿಜ: CM Bommai

01:30 PM Apr 16, 2023 | Team Udayavani |

ರಾಯಚೂರು: ಟಿಕೆಟ್ ಕೈ ತಪ್ಪಿದ್ದರಿಂದ ಕೆಲ ನಾಯಕರು ಪಕ್ಷ ತೊರೆದಿರುವುದು ಬಿಜೆಪಿಗೆ ಸ್ವಲ್ಪ ಮಟ್ಟಿಗೆ ಡ್ಯಾಮೇಜ್ ಆಗುತ್ತಿರುವುದು ನಿಜ. ನಾಮಪತ್ರ ಸಲ್ಲಿಕೆ ಅವಧಿಯೊಳಗೆ ಈ ಡ್ಯಾಮೇಜ್ ಕಂಟ್ರೋಲ್ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದರು.

Advertisement

ನಗರದಲ್ಲಿ ರವಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು,ಕಾಂಗ್ರೆಸ್ ನಲ್ಲಿ ಜಡತ್ವ ಇದೆ. ಕಾಂಗ್ರೆಸ್ ನಾಯಕರಿಲ್ಲದೆ ಖಾಲಿಯಾಗಿತ್ತು. ಈಗ ಬಿಜೆಪಿ ನಾಯಕರನ್ನು ಸೇರಿಸಿಕೊಂಡು ಪಕ್ಷ ಭರ್ತಿಯಾಗುತ್ತಿದೆ. ಎಂದು ಲೇವಡಿ ಮಾಡಿದರು.

ಬಿಜೆಪಿ ನಿಯಮದ ಪ್ರಕಾರ ಹಿರಿಯ ನಾಯಕರಿಗೆ ಟಿಕೆಟ್ ತಪ್ಪಿದೆ. ಆದರೆ, ಅವರಿಗೆ ಬೇರೆ ಉನ್ನತ ಹುದ್ದೆಗಳನ್ನು ನೀಡುವ ಭರವಸೆ ನೀಡಲಾಗಿತ್ತು. ಆದರೂ ಕೆಲ ನಾಯಕರು ಪಕ್ಷ ತೊರೆದಿದ್ದಾರೆ. ಇದರಿಂದ ಬಿಜೆಪಿ ಗೆಲುವಿಗೆ ತೊಡಕಾಗುವುದಿಲ್ಲ. ರಾಜ್ಯದಲ್ಲಿ ಬಿಜೆಪಿ ಬಲಿಷ್ಠವಾಗಿದೆ ಪಕ್ಷದಲ್ಲಿ ಇನ್ನೂ ಸಾಕಷ್ಟು ಲಿಂಗಾಯತ ಸಮುದಾಯದ ನಾಯಕರಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next