Advertisement

ಬಿಎಸ್‌ವೈ ಭೇಟಿ ಮಾಡಿದ್ದು ನಿಜ, ಆದರೆ ಕಾಂಗ್ರೆಸ್‌ ಬಿಡಲ್ಲ

10:53 PM Nov 24, 2019 | Team Udayavani |

ಬೆಳಗಾವಿ: ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್‌ ಬಿಡಲ್ಲ. ಬಿಜೆಪಿಗೆ ಬರುತ್ತೇನೆ ಎಂಬುದು ಊಹಾಪೋಹ ಎಂದು ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಸ್ಪಷ್ಟಪಡಿಸಿದರು. ಭಾನುವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಬೆನ್ನಲ್ಲೇ ಹರಡಿದ್ದ ವದಂತಿ ಕುರಿತು ಸುದ್ದಿಗಾರರ ಜತೆ ಮಾತನಾಡಿ, ನನಗೆ ಕಾಂಗ್ರೆಸ್‌ ಪಕ್ಷದಲ್ಲಿ ಯಾವುದೇ ಅಸಮಾಧಾನವಿಲ್ಲ.

Advertisement

ಹೀಗಾಗಿ ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ ಎಂದರು. ನೆರೆ ಸಂತ್ರಸ್ತರ ಪರಿಹಾರ ವಿಚಾರವಾಗಿ ಮನವಿ ಕೊಡಲು ಮುಖ್ಯಮಂತ್ರಿಗಳ ಭೇಟಿಗೆ ಬಂದಿದ್ದೆ. ಚಿಕ್ಕೋಡಿ ಭಾಗದಲ್ಲಿ ನೆರೆ ಹಾವಳಿಯಿಂದ ಅಪಾರ ಪ್ರಮಾಣದಲ್ಲಿ ನಷ್ಟವಾಗಿದೆ. ಈಗಲೂ ಎಷ್ಟೋ ಜನರಿಗೆ ಪರಿಹಾರ ಸಿಕ್ಕಿಲ್ಲ. ಅನೇಕರ ಹೆಸರು ಪರಿಹಾರದ ಪಟ್ಟಿಯಿಂದ ಕೈ ಬಿಟ್ಟು ಹೋಗಿವೆ. ಹೀಗಾಗಿ ಮನೆಗಳ ಮರು ಸಮೀಕ್ಷೆ ಮಾಡಿಸಿ ಪರಿಹಾರ ನೀಡಬೇಕು ಎಂದು ಕೋರಲು ಸಿಎಂ ಬಳಿ ಬಂದಿದ್ದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next