Advertisement

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

07:23 PM Mar 27, 2024 | Team Udayavani |

ಮೈಸೂರು: ಕಾಂಗ್ರೆಸ್‌ ಟಿಕೆಟ್‌ ಸಂಬಂಧ ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ. ದಲಿತ ಎಡಗೈ ಬದಲು ಬಲಗೈ ಸಮುದಾಯಕ್ಕೆ ಟಿಕೆಟ್‌ ಕೊಡಬೇಕೆಂಬ ಒತ್ತಾಯವಿದೆ. ಈ ಬಗ್ಗೆ ನಾನು ಅವರ ಜತೆ ಮಾತನಾಡಿದ್ದು, ಸಮಾಧಾನದಿಂದ ಇರುವಂತೆ ಹೇಳಿದ್ದೇನೆ. ಆ ಕ್ಷೇತ್ರಕ್ಕೆ ಇನ್ನೂ ಟಿಕೆಟ್‌ ಘೋಷಣೆ ಆಗಿಲ್ಲ. ಆದರೂ ಎಡಗೈ ಅವರಿಗೆ ಸಿಗುತ್ತೆ ಅಂತ ಭಯಪಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಸುದ್ದಿಗಾರರಿಗೆ ತಿಳಿಸಿದರು.

Advertisement

ಫೋನ್‌ನಲ್ಲಿ ಬ್ಯುಸಿಯಾದ ಸಿಎಂ: ಎಚ್‌.ಡಿ.ಕೋಟೆ ರೆಸಾರ್ಟ್‌ನಿಂದ ಮೈಸೂರಿಗೆ ಆಗಮಿಸಿದ ಮುಖ್ಯಮಂತ್ರಿಗಳು ನಗರದ ಹೋಟೆಲ್‌ ಒಂದಕ್ಕೆ ಕಾಫಿಗೆ ತೆರಳಿದರು. ಈ ಸಂದರ್ಭ ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರು ಕರೆ ಮಾಡಿದರು. ಈ ವೇಳೆ ಪೋನ್‌ ಸ್ವೀಕರಿಸಿದ ಮುಖ್ಯಮಂತ್ರಿಗಳು, ಹೇಳು ಹೊರಟ್ಟಿ ಎಂದು ಮಾತು ಆರಂಭಿಸಿ ಬೇಡ ಬೇಡ ಯಾವುದನ್ನೂ ತಗೋಬೇಡ ಎಂದು ಸೂಚಿಸಿದರು.

 

Advertisement

Udayavani is now on Telegram. Click here to join our channel and stay updated with the latest news.

Next