Advertisement

ಮಗನಿಗೆ ಟಿಕೆಟ್‌ ಕೊಡುವುದು ಹೈಕಮಾಂಡ್‌ಗೆ ಬಿಟ್ಟ ವಿಚಾರ; V. Somanna

09:23 PM Apr 10, 2023 | Team Udayavani |

ತುಮಕೂರು: ಗುಬ್ಬಿ ವಿಧಾನಸಭಾ ಕ್ಷೇತ್ರದಿಂದ ಮಗ ಅರುಣ್‌ ಸೋಮಣ್ಣ ಅವರಿಗೆ ಟಿಕೆಟ್‌ ನೀಡುವಂತೆ ಪಕ್ಷದ ವರಿಷ್ಠರನ್ನು ಕೇಳಿರುವುದು ನಿಜ. ಕೊಡುವುದು, ಬಿಡುವುದು ಪಕ್ಷದ ವರಿಷ್ಠರಿಗೆ ಬಿಟ್ಟ ವಿಚಾರ ಎಂದು ವಸತಿ ಸಚಿವ ವಿ. ಸೋಮಣ್ಣ ತಿಳಿಸಿದರು.

Advertisement

ಅವರು ಶ್ರೀ ಸಿದ್ಧಗಂಗಾ ಮಠಕ್ಕೆ ಪತ್ನಿ ಶೈಲಜಾ ಅವರೊಂದಿಗೆ ಸೋಮವಾರ ಭೇಟಿ ನೀಡಿ ಹಿರಿಯ ಶ್ರೀಗಳ ಗದ್ದುಗೆಗೆ ಪೂಜೆ ಸಲ್ಲಿಸಿ, ಪೀಠ್ಯಾಧ್ಯಕ್ಷರಾದ ಶ್ರೀ ಸಿದ್ಧಲಿಂಗಸ್ವಾಮೀಜಿಗಳ ಆಶೀರ್ವಾದ ಪಡೆದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ನನ್ನ ಮಗ ಹಲವಾರು ವರ್ಷಗಳಿಂದ ಪಕ್ಷದಲ್ಲಿದ್ದು, ಪಕ್ಷಕ್ಕಾಗಿ ದುಡಿದಿದ್ದಾನೆ. ಅವನಿಗೆ ಟಿಕೆಟ್‌ ನೀಡಿದರೆ ಪಕ್ಷಕ್ಕಾಗಿ ಕೆಲಸ ಮಾಡುತ್ತಾನೆ. ಪಕ್ಷ ಟಿಕೆಟ್‌ ನೀಡಿದರೆ ಸಂತೋಷ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next