Advertisement

B. Y. Vijayendra ಬಗ್ಗೆ ಹಾದಿಯಲ್ಲಿ ಮಾತನಾಡುವುದು ಸಲ್ಲ: ರೇಣುಕಾಚಾರ್ಯ

06:29 PM Sep 18, 2024 | Poornashri K |

ಹೊನ್ನಾಳಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಗ್ಗೆ ಹಾದಿಬೀದಿಯಲ್ಲಿ ಮಾತನಾಡುವುದು ಸರಿಯಲ್ಲ, ಆಂತರಿಕ ವಿಷಯಗಳನ್ನು ಪಕ್ಷದೊಳಗೆ ಮಾತನಾಡಬೇಕು. ಯಾವುದೇ ಕಾರಣಕ್ಕೂ ರಾಜ್ಯಾಧ್ಯಕ್ಷರ ಬದಲಾವಣೆ ಇಲ್ಲ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು.

Advertisement

ಸುದ್ದಿಗಾರರ ಜತೆ ಮಾತನಾಡಿದ ಅವರು, ವಿಜಯೇಂದ್ರ ಅವರನ್ನು ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಸಂಘ ಪರಿವಾರದೊಂದಿಗೆ ಚರ್ಚಿಸಿ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. ಈಗ ಕೆಲವು ಹಿರಿಯ ನಾಯಕರು ವಿಜಯೇಂದ್ರ ಬಗ್ಗೆ ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ.

ಹೈಕಮಾಂಡ್‌ ನೇಮಕ ಮಾಡಿದ್ದನ್ನು ಕೆಲವರು ತಿರಸ್ಕಾರ ಮಾಡಿದರೆ ವರಿಷ್ಠರಿಗೆ ಇವರೇನು ಬೆಲೆ ಕೊಟ್ಟಂತಾಯಿತು ಎಂದು ಯತ್ನಾಳ್‌, ರಮೇಶ ಜಾರಕಿಹೊಳಿ ಬಣಕ್ಕೆ ತಿರುಗೇಟು ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next