Advertisement

ಸೋತವರಿಗೆ ಸಚಿವ ಸ್ಥಾನ ಯಾಕೆ, ಸ್ವಾಭಿಮಾನಕ್ಕೆ ಧಕ್ಕೆಯಾದರೆ ರಾಜೀನಾಮೆ; ರೇಣುಕಾಚಾರ್ಯ

09:10 AM Aug 22, 2019 | Nagendra Trasi |

ಬೆಂಗಳೂರು: ಸ್ವಾಭಿಮಾನಕ್ಕೆ ಧಕ್ಕೆಯಾದರೆ ಇವತ್ತೇ ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ..ಇದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಆಪ್ತ ಎಂಪಿ ರೇಣುಕಾಚಾರ್ಯ ಬಹಿರಂಗವಾಗಿ ವ್ಯಕ್ತಪಡಿಸಿದ ಅಸಮಾಧಾನ!

Advertisement

ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಚುನಾವಣೆಯಲ್ಲಿ ಸೋತವರಿಗೆ ಮಂತ್ರಿಗಿರಿ ಯಾಕೆ ಕೊಡಬೇಕಿತ್ತು..ಅದರ ಬದಲು ಗೆದ್ದವರಿಗೆ ಸ್ಥಾನ ಕೊಡಬಹುದಿತ್ತಲ್ಲಾ ಎಂದು ಹೇಳಿದರು.

ನನ್ನ ಅಸಮಾಧಾನ ಮುಖ್ಯಮಂತ್ರಿ ಯಡಿಯೂರಪ್ಪನವರಾಗಲಿ, ಪಕ್ಷದ ಬಗ್ಗೆ ಅಲ್ಲ ಎಂದು ಈ ಸಂದರ್ಭದಲ್ಲಿ ಸಮಜಾಯಿಷಿ ನೀಡಿದರು. ಪಕ್ಷದಲ್ಲಿ ಕೆಲಸ ಮಾಡಿ ಗೆದ್ದವರಿಗೆ ಸ್ಥಾನ ಕೊಡುವುದಿಲ್ಲ. ಸೋತವರಿಗೆ ಸಚಿವ ಸ್ಥಾನ ಕೊಡುತ್ತಾರೆ ಎಂದು ಪರೋಕ್ಷವಾಗಿ ಲಕ್ಷ್ಮಣ ಸವದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next