Advertisement

I.N.D.I.A alliance; ಕೂಸು ಹುಟ್ಟುವ ಮುನ್ನವೇ ಹೆಸರು ಇಟ್ಟಿದ್ದು ಸರಿಯಲ್ಲ: ಶಾಮನೂರು

09:03 PM Dec 20, 2023 | Team Udayavani |

ದಾವಣಗೆರೆ:ಇಂಡಿಯಾ ಮೈತ್ರಿಕೂಟದಿಂದ ಪ್ರಧಾನಿ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಹೆಸರು ಘೋಷಿಸಿರುವುದು ಕೂಸು ಹುಟ್ಟುವ ಮುನ್ನವೇ ಹೆಸರಿಟ್ಟಂತಾಗಿದೆ ಎಂದು ಹಿರಿಯ ಕಾಂಗ್ರೆಸ್‌ ಮುಖಂಡ, ಮಲ್ಲಿಕಾರ್ಜುನ ಖರ್ಗೆ ಆಪ್ತ, ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಯಲ್ಲಿ ಗೆದ್ದ ಬಳಿಕ ಪ್ರಧಾನಿ ಸ್ಥಾನಕ್ಕೆ ಆಯ್ಕೆ ಮಾಡಬೇಕು. ಚುನಾವಣೆ ಮುಗಿದ ಬಳಿಕ ಆಯ್ಕೆಯಾಗಲಿ ಎಂದು ಸ್ವತಃ ಮಲ್ಲಿಕಾರ್ಜುನ ಖರ್ಗೆ ಅವರೇ ಹೇಳಿದ್ದಾರೆ.

ಹಾಗಾಗಿ ಚುನಾವಣೆಯಲ್ಲಿ ಗೆದ್ದ ನಂತರ ಪ್ರಧಾನಿ ಅಭ್ಯರ್ಥಿ ಆಯ್ಕೆ ಬಗ್ಗೆ ಯೋಚನೆ ಮಾಡಬೇಕು. ಆದರೂ, ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಅಭ್ಯರ್ಥಿಯಾಗಿ ಘೋಷಣೆ ಮಾಡಿರುವುದನ್ನು ಸ್ವಾಗತಿಸುವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next