Advertisement

ಸಿಎಂ ಆಪ್ತ ಶಾಸಕ MTB ನಾಗರಾಜ್‌ ನಿವಾಸ, ಕಚೇರಿ ಮೇಲೆ IT ದಾಳಿ 

10:31 AM Feb 09, 2017 | |

ಬೆಂಗಳೂರು : ಹೊಸಕೋಟೆ ಕ್ಷೇತ್ರದ ಕಾಂಗ್ರೆಸ್‌ ಶಾಸಕ ,ಮುಖ್ಯಮಂತ್ರಿ ಸಿದ್ದರಾಮಯ್ಯ ಅಪ್ತವಲಯದಲ್ಲಿ ಗುರುತಿಸಿಕೊಂಡಿರುವ ಎಂಟಿಬಿ ನಾಗರಾಜ್‌ ಮತ್ತು ಸಂಬಂಧಿಕರ ನಿವಾಸಗಳ ಮೇಲೆ ಗುರುವಾರ ಏಕಕಾಲದಲ್ಲಿ  ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿರುವ ಬಗ್ಗೆ ವರದಿಯಾಗಿದೆ.

Advertisement

ಗುರುಡಾಚಾರ್‌ ಪಾಳ್ಯದಲ್ಲಿರುವ ನಾಗರಾಜ್‌ ನಿವಾಸ ಮತ್ತು ನಗರದ ವಿವಿಧೆಡೆ ಇರುವ ಸಂಬಂಧಿಕರ ನಿವಾಸಗಳಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. 

Advertisement

Udayavani is now on Telegram. Click here to join our channel and stay updated with the latest news.

Next