Advertisement

ಸಿಲಿಕಾನ್ ಸಿಟಿಯಲ್ಲಿ ಬೃಹತ್ ಐಟಿ ದಾಳಿ: ಉದ್ಯಮಿಗಳಿಗೆ ನಡುಕ ಹುಟ್ಟಿಸಿದ ರೇಡ್

03:15 PM Jun 01, 2022 | Team Udayavani |

ಬೆಂಗಳೂರು: ಆದಾಯ ತೆರಿಗೆ ಬಾಕಿ, ಆದಾಯ ಮರೆಮಾಚಿರುವ ಆರೋಪದ ಮೇಲೆ ಐಟಿ ಅಧಿಕಾರಿಗಳು ಎಂಬೆಸ್ಸಿ ಕಚೇರಿಗಳ ಮೇಲೆ ರಾಜ್ಯಾದ್ಯಂತ ಏಕಕಾಲದಲ್ಲಿ 50 ಕ್ಕೂ ಹೆಚ್ಚು ಕಡೆ ದಾಳಿ ನಡೆಸಿ ಶೋಧ ನಡೆಸಿದ್ದಾರೆ.

Advertisement

ಎಂಬೆಸ್ಸಿ  ಗ್ರೂಪ್ ನ ಎಂ ಡಿ ಜಿತು ವಿರ್ವಾನಿ, ನಿರ್ದೇಶಕ ನರಪತ್ ಸಿಂಗ್ ಚರೋರಿಯಾ ಅವರ ಮನೆಗಳು ಹಾಗೂ ಪ್ಲಾಟ್ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು, ರಾಜ್ಯಾದ್ಯಂತ ಇರುವ ಎಂಬೆಸ್ಸಿ ಕಚೇರಿಗಳ ಮೇಲೂ ದಾಳಿ ಮಾಡಿದ್ದಾರೆ.

ಇದನ್ನೂ ಓದಿ: ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ, ರಾಹುಲ್ ಗೆ ಇ.ಡಿ. ಸಮನ್ಸ್ ಜಾರಿ, ಕಾಂಗ್ರೆಸ್ ಆಕ್ರೋಶ

ಐಟಿ ರಿಟರ್ನ್ಸ್ ಸಲ್ಲಿಕೆಗಿಂತ ಹೆಚ್ಚಿನ ಆದಾಯ ಹೊಂದಿರುವುದನ್ನು ಪತ್ತೆ ಮಾಡಿ, ಮನೆಗಳ ಮೇಲೆ ಸರ್ಚ್ ವಾರೆಂಟ್ ತಂದು ಈ  ರೇಡ್ ನಡೆಸಲಾಗಿದ್ದು, ಸುಮಾರು 600 ಕ್ಕೂ ಹೆಚ್ಚು ಅಧಿಕಾರಿಗಳ ತಂಡಗಳು ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದೆ.

ಗೋವಾ – ಕರ್ನಾಟಕ ಅಧಿಕಾರಿಗಳ ತಂಡದಿಂದ ಏಕಕಾಲಕ್ಕೆ ದಾಳಿ ಮಾಡಿ,  ಲೆಕ್ಕಪತ್ರಗಳ ಶೋಧನೆ ನಡೆಸುತ್ತಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next